Advertisement
ಸುದ್ದಿಗಳು

ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಕಾದಂಬರಿ | ರಾಜ್ಯಪಾಲರಿಂದ ಬಿಡುಗಡೆ |

Share

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಚೈತನ್ಯ ಮಹಾಪ್ರಭುಗಳ ಜೀವಾನಾಧರಿತ ಕಾದಂಬರಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.

Advertisement

ಬಳಿಕ ರಾಜ್ಯಪಾಲರು, ಚೈತನ್ಯ ಮಹಾಪ್ರಭುಗಳು ಭಕ್ತಿ ಚಳುವಳಿಯ ಮಹಾನ್ ಸಂತ , ಸಮಾಜ ಸುಧಾರಕ ಮತ್ತು ಕೃಷ್ಣ ಭಕ್ತ , ಈ ಯುಗದಲ್ಲಿ ಪ್ರೀತಿ ಮತ್ತು ಭಕ್ತಿಯ ಮೂಲಕ ಸಮಾಜಕ್ಕೆ ಧೈವಿಕ , ಆದ್ಯಾತ್ಮಿಕತೆಯ ಮಾರ್ಗವನ್ನು ತೋರಿಸಿದವರು. ಚೈತನ್ಯ ಮಹಾಪ್ರಭು ಅವರ ಬೋಧನೆಗಳು ಆಧ್ಯಾತ್ಮಿಕ ಸಮಾನತೆ , ಸಹೋದರತ್ವ ಮತ್ತು ಸ್ವಾತಂತ್ರದ ತತ್ವಗಳನ್ನು ಆಧರಿಸಿವೆ ಎಂದು ಅವರು ಹೇಳಿದರು. ಚೈತನ್ಯ ಮಹಾಪ್ರಭು ಅವರ ಮುಖ್ಯ ಸಂದೇಶವೆಂದರೆ ಹರಿನಾಮ ಸಂಕೀರ್ತನೆ ಇದರ ಅರ್ಥ ಸಾಮೂಹಿಕ ಪಠಣ ಮತ್ತು  ದೇವರ ಹೆಸರಿನ ಕೀರ್ತನೆ. ಪ್ರತಿ ನಗರ ಮತ್ತು ಹಳ್ಳಿಗಳಲ್ಲಿ ಶ್ರೀ ಕೃಷ್ಣನ ಪವಿತ್ರ ನಾಮವನ್ನು ಜಪಿಸಬೇಕು ಎಂದು ಬಯಸಿದ್ದರು. 12 ವರ್ಷಗಳ ಅವಧಿಯಲ್ಲಿ 6 ಖಂಡಗಳಲ್ಲಿ 100ಕ್ಕೂ ಹೆಚ್ಚು  ಇಸ್ಕಾನ್ ದೇವಾಲಯಗಳನ್ನು ಸ್ಧಾಪಿಸುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಪಾಶ್ಟಿಮಾತ್ಯ ದೇಶಗಳಲ್ಲೂ ಹರಡುವ ಕೆಲಸ ಮಾಡಿದ್ದಾರೆ. ಆಧುನಿಕ ಯುಗದಲ್ಲಿ ಭಾರತದ ಸಂಸ್ಕೃತಿ ಮತ್ತು ಪರಂಪರೆಯ ಶ್ರೇಷ್ಠ ರಾಯಾಭಾರಿಯಾಗಿದ್ದಾರೆ ಎಂದು ತಿಳಿಸಿದರು. ಚೈತನ್ಯ ಪ್ರಭುಗಳ ಜೀವನ ಕುರಿತು ಕನ್ನಡದಲ್ಲಿ ಬರೆದ ಬರಹಕ್ಕಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕೃತ ಡಾ. ಮೊಗಸಾಲೆ ಅವರನ್ನು ಅಭಿನಂದಿಸುವುದಾಗಿ ಹೇಳಿದ ಅವರು .ಈ ಕೃತಿ ಭಾರತೀಯ, ಕನ್ನಡ ಸಾಹಿತ್ಯದ ಪ್ರಮುಖ ಪುಸ್ತಕವಾಗಲಿದೆ .ಜತೆಗೆ ಸ್ಪೂರ್ತಿಯ ಮೂಲ ಹಾಗೂ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ವೇಳೆ ವ್ಯಾಸರಾಜ ಮಠದ ಪೀಠಾಧಿಪತಿ  ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ, ನಟ ಪ್ರಕಾಶ್ ಬೆಳವಾಡಿ, ಮೈಸೂರು ಇಸ್ಕಾನ್ ಅಧ್ಯಕ್ಷ ಸ್ತೋಕ ಕೃಷ್ಣ ಸ್ವಾಮಿ, ಬೆಂಗಳೂರು ಇಸ್ಕಾನ್ ಅಧ್ಯಕ್ಷ ಚಂಚಲ ಪತಿದಾಸ್, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ನಿವೃತ್ತ ಕುಲಪತಿ ಡಾ.ಮಲ್ಲೇಪುರಂ ಜಿ.ವೆಂಕಟೇಶ್ ಸೇರಿದಂತೆ ಮತ್ತಿರರು ಉಪಸ್ಧಿತರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

5 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

7 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

14 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

20 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

20 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

1 day ago