ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ | ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ |

May 19, 2024
4:51 PM

ಬಳ್ಳಾರಿ ಜಿಲ್ಲೆಯ 36,944 ರೈತರ ಖಾತೆಗೆ (Farmers Account) ಎರಡು ಹಂತಗಳಲ್ಲಿ ಡಿಬಿಟಿ ಮೂಲಕ ಒಟ್ಟು 41.40 ಕೋಟಿ ರೂ. ಬರ ಪರಿಹಾರ (Drought Relief) ಹಣವನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, 2023-24 ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಎಲ್ಲಾ 05 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬರ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಹಾನಿಯಾಗಿರುವ ಬೆಳೆಗಳಿಗೆ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇರೆಗೆ ನಿಖರ ದಾಖಲೆ ಹೊಂದಿರುವ, ಪಹಣಿ ಜೋಡಣೆಯಾಗಿರುವ ರೈತರಿಗೆ ಡಿಬಿಟಿ ಮೂಲಕ ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಮೊದಲ ಹಂತದ 9 ಕಂತುಗಳಲ್ಲಿ ಒಟ್ಟು 36,944 ರೈತರಿಗೆ ರೂ.7.26 ಕೊಟಿ ರೂ. ಬೆಳೆ ಹಾನಿ ಪರಿಹಾರ ವಿತರಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

2ನೇ ಹಂತದಲ್ಲಿ ಜಿಲ್ಲೆಯ ಅರ್ಹ 31,351 ರೈತರಿಗೆ ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಅನ್ವಯ 34.03 ಕೋಟಿ ರೂ. ಪರಿಹಾರ (ಇನ್ ಪುಟ್ ಸಬ್ಸಿಡಿ) ವಿತರಣೆ ಮಾಡಲು ಅನುಮೋದನೆ ನೀಡಿ, ಡಿಬಿಟಿ ಮೂಲಕ ರೈತರ ಖಾತೆಗೆ ಜಮೆ ಮಾಡಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯ 2 ಹಂತದಲ್ಲಿ ಒಟ್ಟು 36,944 ರೈತರ ಖಾತೆಗಳಿಗೆ ನೇರವಾಗಿ 41.40 ಕೋಟಿ ರೂ.ಗಳನ್ನು ಜಮೆ ಮಾಡಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror