Advertisement
MIRROR FOCUS

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ | ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ |

Share

ಬಳ್ಳಾರಿ ಜಿಲ್ಲೆಯ 36,944 ರೈತರ ಖಾತೆಗೆ (Farmers Account) ಎರಡು ಹಂತಗಳಲ್ಲಿ ಡಿಬಿಟಿ ಮೂಲಕ ಒಟ್ಟು 41.40 ಕೋಟಿ ರೂ. ಬರ ಪರಿಹಾರ (Drought Relief) ಹಣವನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, 2023-24 ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಎಲ್ಲಾ 05 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬರ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಹಾನಿಯಾಗಿರುವ ಬೆಳೆಗಳಿಗೆ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇರೆಗೆ ನಿಖರ ದಾಖಲೆ ಹೊಂದಿರುವ, ಪಹಣಿ ಜೋಡಣೆಯಾಗಿರುವ ರೈತರಿಗೆ ಡಿಬಿಟಿ ಮೂಲಕ ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಮೊದಲ ಹಂತದ 9 ಕಂತುಗಳಲ್ಲಿ ಒಟ್ಟು 36,944 ರೈತರಿಗೆ ರೂ.7.26 ಕೊಟಿ ರೂ. ಬೆಳೆ ಹಾನಿ ಪರಿಹಾರ ವಿತರಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

2ನೇ ಹಂತದಲ್ಲಿ ಜಿಲ್ಲೆಯ ಅರ್ಹ 31,351 ರೈತರಿಗೆ ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಅನ್ವಯ 34.03 ಕೋಟಿ ರೂ. ಪರಿಹಾರ (ಇನ್ ಪುಟ್ ಸಬ್ಸಿಡಿ) ವಿತರಣೆ ಮಾಡಲು ಅನುಮೋದನೆ ನೀಡಿ, ಡಿಬಿಟಿ ಮೂಲಕ ರೈತರ ಖಾತೆಗೆ ಜಮೆ ಮಾಡಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯ 2 ಹಂತದಲ್ಲಿ ಒಟ್ಟು 36,944 ರೈತರ ಖಾತೆಗಳಿಗೆ ನೇರವಾಗಿ 41.40 ಕೋಟಿ ರೂ.ಗಳನ್ನು ಜಮೆ ಮಾಡಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

59 minutes ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

1 hour ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago