#DKShivakumar | ಡಿಸಿಎಂ ಡಿಕೆ ಶಿವಕುಮಾರ್​​ಗೆ ನಿರಾಳ | ಸುಪ್ರೀಂಕೋರ್ಟ್‌ ನಿಂದ​ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ |

July 31, 2023
1:35 PM
ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಸುಪ್ರೀಂ ಕೋರ್ಟ್​ನಲ್ಲೂ ಬಿಗ್​ ರಿಲೀಫ್​ ಸಿಕ್ಕಿದೆ. ಡಿಕೆ ಶಿವಕುಮಾರ್​ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಡಿಕೆ ಶಿವಕುಮಾರ್​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿತ್ತು. ಆದ್ರೆ, ಸುಪ್ರೀಂಕೋರ್ಟ್ ಇಂದು(ಜುಲೈ 31) ಸಿಬಿಐ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಡಿಕೆ ಶಿವಕುಮಾರ್​​ ನಿರಾಳರಾಗಿದ್ದಾರ

Advertisement
Advertisement

ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಹೇಳಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು, ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

Advertisement

ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಅಲ್ಲದೇ 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು ಇದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಇದೇ ಅದೇ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದ್ದು, ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು
May 15, 2024
7:50 PM
by: The Rural Mirror ಸುದ್ದಿಜಾಲ
ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?
May 15, 2024
2:29 PM
by: ಮುರಲೀಕೃಷ್ಣ ಕೆ ಜಿ
Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?
May 15, 2024
11:43 AM
by: ಸಾಯಿಶೇಖರ್ ಕರಿಕಳ
ವಳಲಂಬೆಯಲ್ಲಿ ಯಕ್ಷಗಾನ | ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿಯವರಿಗೆ ಗೌರವಾರ್ಪಣೆ | ಕಲಾವಿದರನ್ನು ಗೌರವಿಸುವುದು ಉತ್ತಮ ಕೆಲಸ -ಹರೀಶ್ ಬಳಂತಿಮೊಗರು |
May 14, 2024
10:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror