ಸುದ್ದಿಗಳು

ಚುನಾವಣೆ ಘೋಷಣೆ | ಕೂಡಲೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವು ಮಾಡಲು ಸೂಚನೆ*

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ,  ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಿರ್ದೇಶನ ನೀಡಿದರು.

Advertisement

ಅವರು  ಬುಧವಾರ  ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ, ಕಾರಣ ಅಧಿಕೃತ ಹಾಗೂ  ಅನಧಿಕೃತವಾಗಿ ಹಾಕಲಾಗಿರುವ ಎಲ್ಲಾ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಸರ್ಕಾರದ ಅಧಿಕೃತ ವೆಬ್‍ಸೈಟ್‍ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದ ಅವರು, 24, 72  ಗಂಟೆಯೊಳಗೆ ನಿರ್ವಹಿಸಬೇಕಾದ ಕರ್ತವ್ಯಗಳನ್ನು ವಿವರಿಸಿದರು.

ಒಮ್ಮೆ ತೆರವು ಮಾಡಲಾದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಹಾಗೂ ಕಟ್‍ಔಟ್‍ಗಳನ್ನು ಪುನಃ ಅಳವಡಿಸಿದ್ದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಕರ್ನಾಟಕ ತೆರೆದ ಸ್ಥಳಗಳ (ವಿರೂಪಗೊಳಿಸುವಿಕೆ ತಡೆಗಟ್ಟುವ) ಕಾಯ್ದೆ-1981ರಂತೆ ಆರು ತಿಂಗಳ ಜೈಲು ಶಿಕ್ಷೆ, ಎರಡು ಸಾವಿರ ರೂ.ಗಳ ದಂಡ ವಿಧಿಸಬಹುದಾಗಿದೆ, ಅದನ್ನು ಅನುಷ್ಟಾನಗೊಳಿಸುವಂತೆಯೂ ಸಲಹೆ ನೀಡಿದರು.
ಅದೇ ರೀತಿ ಸಂಬಂಧಿಸಿದ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ನಿಗದಿತ ಕಾಲಮಿತಿಯಲ್ಲಿ ವರದಿ ನೀಡಬೇಕು, ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು, ನಿರ್ಲಕ್ಷ್ಯತನಕ್ಕೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸುವಂತೆ ಎಚ್ಚರಿಕೆ ನೀಡಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಮಾತನಾಡಿ, ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ನೀಡಬೇಕಾದ ವರದಿಗಳನ್ನು ಕೂಡಲೇ ನೀಡುವಂತೆ ತಿಳಿಸಿದರು.
ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಸಂಬಂಧಪಟ್ಟ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪುರಸಭೆಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

3 hours ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

3 hours ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

3 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

3 hours ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

11 hours ago

ಹೃದಯ ಸಂಬಂಧಿ ಕಾಯಿಲೆ ಆತಂಕ | ಹಾಸನ ಜಿಲ್ಲೆಯಲ್ಲಿ 1 -10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ

ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…

11 hours ago