Advertisement
ಸುದ್ದಿಗಳು

ಚುನಾವಣೆ ಘೋಷಣೆ | ಕೂಡಲೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವು ಮಾಡಲು ಸೂಚನೆ*

Share

ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ,  ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಿರ್ದೇಶನ ನೀಡಿದರು.

ಅವರು  ಬುಧವಾರ  ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ, ಕಾರಣ ಅಧಿಕೃತ ಹಾಗೂ  ಅನಧಿಕೃತವಾಗಿ ಹಾಕಲಾಗಿರುವ ಎಲ್ಲಾ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಸರ್ಕಾರದ ಅಧಿಕೃತ ವೆಬ್‍ಸೈಟ್‍ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದ ಅವರು, 24, 72  ಗಂಟೆಯೊಳಗೆ ನಿರ್ವಹಿಸಬೇಕಾದ ಕರ್ತವ್ಯಗಳನ್ನು ವಿವರಿಸಿದರು.

ಒಮ್ಮೆ ತೆರವು ಮಾಡಲಾದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಹಾಗೂ ಕಟ್‍ಔಟ್‍ಗಳನ್ನು ಪುನಃ ಅಳವಡಿಸಿದ್ದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಕರ್ನಾಟಕ ತೆರೆದ ಸ್ಥಳಗಳ (ವಿರೂಪಗೊಳಿಸುವಿಕೆ ತಡೆಗಟ್ಟುವ) ಕಾಯ್ದೆ-1981ರಂತೆ ಆರು ತಿಂಗಳ ಜೈಲು ಶಿಕ್ಷೆ, ಎರಡು ಸಾವಿರ ರೂ.ಗಳ ದಂಡ ವಿಧಿಸಬಹುದಾಗಿದೆ, ಅದನ್ನು ಅನುಷ್ಟಾನಗೊಳಿಸುವಂತೆಯೂ ಸಲಹೆ ನೀಡಿದರು.
ಅದೇ ರೀತಿ ಸಂಬಂಧಿಸಿದ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ನಿಗದಿತ ಕಾಲಮಿತಿಯಲ್ಲಿ ವರದಿ ನೀಡಬೇಕು, ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು, ನಿರ್ಲಕ್ಷ್ಯತನಕ್ಕೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸುವಂತೆ ಎಚ್ಚರಿಕೆ ನೀಡಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಮಾತನಾಡಿ, ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ನೀಡಬೇಕಾದ ವರದಿಗಳನ್ನು ಕೂಡಲೇ ನೀಡುವಂತೆ ತಿಳಿಸಿದರು.
ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಸಂಬಂಧಪಟ್ಟ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪುರಸಭೆಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

12 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

17 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago