Advertisement
ಸುದ್ದಿಗಳು

ಚುನಾವಣೆ ಘೋಷಣೆ | ಕೂಡಲೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವು ಮಾಡಲು ಸೂಚನೆ*

Share

ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ,  ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಿರ್ದೇಶನ ನೀಡಿದರು.

ಅವರು  ಬುಧವಾರ  ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ, ಕಾರಣ ಅಧಿಕೃತ ಹಾಗೂ  ಅನಧಿಕೃತವಾಗಿ ಹಾಕಲಾಗಿರುವ ಎಲ್ಲಾ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಸರ್ಕಾರದ ಅಧಿಕೃತ ವೆಬ್‍ಸೈಟ್‍ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದ ಅವರು, 24, 72  ಗಂಟೆಯೊಳಗೆ ನಿರ್ವಹಿಸಬೇಕಾದ ಕರ್ತವ್ಯಗಳನ್ನು ವಿವರಿಸಿದರು.

ಒಮ್ಮೆ ತೆರವು ಮಾಡಲಾದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಹಾಗೂ ಕಟ್‍ಔಟ್‍ಗಳನ್ನು ಪುನಃ ಅಳವಡಿಸಿದ್ದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಕರ್ನಾಟಕ ತೆರೆದ ಸ್ಥಳಗಳ (ವಿರೂಪಗೊಳಿಸುವಿಕೆ ತಡೆಗಟ್ಟುವ) ಕಾಯ್ದೆ-1981ರಂತೆ ಆರು ತಿಂಗಳ ಜೈಲು ಶಿಕ್ಷೆ, ಎರಡು ಸಾವಿರ ರೂ.ಗಳ ದಂಡ ವಿಧಿಸಬಹುದಾಗಿದೆ, ಅದನ್ನು ಅನುಷ್ಟಾನಗೊಳಿಸುವಂತೆಯೂ ಸಲಹೆ ನೀಡಿದರು.
ಅದೇ ರೀತಿ ಸಂಬಂಧಿಸಿದ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ನಿಗದಿತ ಕಾಲಮಿತಿಯಲ್ಲಿ ವರದಿ ನೀಡಬೇಕು, ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು, ನಿರ್ಲಕ್ಷ್ಯತನಕ್ಕೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸುವಂತೆ ಎಚ್ಚರಿಕೆ ನೀಡಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಮಾತನಾಡಿ, ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ನೀಡಬೇಕಾದ ವರದಿಗಳನ್ನು ಕೂಡಲೇ ನೀಡುವಂತೆ ತಿಳಿಸಿದರು.
ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಸಂಬಂಧಪಟ್ಟ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪುರಸಭೆಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

3 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

16 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

16 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

24 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago