ವಿಜಯಪುರ ಜಿಲ್ಲೆಯ ಮಮದಾಪುರ ಅರಣ್ಯ ಪ್ರದೇಶಕ್ಕೆ ಶ್ರೀಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯತಾಣ ಎಂದು ಮರು ನಾಮಕರಣ ಮಾಡಲು ಸರ್ಕಾರ ನಿರ್ಧಾರಿಸಿರುವುದಾಗಿ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ. ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಸಿದ್ದೇಶ್ವರ ಸ್ವಾಮೀಜಿ, ಪರಿಸರ ಸಂರಕ್ಷಣೆ ಮತ್ತು ಸಮುದಾಯದ ಯೋಗಕ್ಷೇಮಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶ್ರೀಗಳ ಎರಡನೇ ಪುಣ್ಯಸ್ಮರಣೆಯ ದಿನವಾದ ಜನವರಿ 2ರಂದು ವಿಧ್ಯುಕ್ತವಾಗಿ ಮಮದಾಪುರ ಅರಣ್ಯ ಪ್ರದೇಶಕ್ಕೆ ಮರು ನಾಮಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಪಾರಂಪರಿಕ ತಾಣ ಘೋಷಣೆಯಿಂದ ಸ್ಥಳೀಯ ಜನರ ಅಥವಾ ಕಾಡನ್ನು ಅವಲಂಬಿಸಿರುವ ಆದಿವಾಸಿಗಳ ದೈನಂದಿನ ಬದುಕಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪಾರಂಪರಿಕ ತಾಣದ ನಿರ್ವಹಣೆಯಲ್ಲಿ ಸ್ಥಳೀಯ ಜನರ ಸಹಕಾರ ಅಗತ್ಯ ಎಂದು ಅವರು ತಿಳಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…