Advertisement
MIRROR FOCUS

ಕಾವೇರಿ ನೀರಿಗಾಗಿ ಕರ್ನಾಟಕದ ಪರ ವಾದಿಸಿದ್ದ ಖ್ಯಾತ ವಕೀಲ ಫಾಲಿ ನಾರಿಮನ್ ಇನ್ನಿಲ್ಲ ಪ್ರಧಾನಿ ಸೇರಿದಂತೆ ಗಣ್ಯರ ಸಂತಾಪ

Share

ನಮ್ಮ ರಾಜ್ಯದ ಕಾವೇರಿ ನೀರಿಗೂ(Cauvery Water), ಹಿರಿಯ ವಕೀಲ ಫಾಲಿ ಎಸ್‌ ನಾರಿಮನೆ(Fali S Nariman)ಗೂ ಅವಿನಾಭಾವ ಸಂಬಂಧ. ಕರುನಾಡಿನ(Karnataka) ಜನರ ನಾಡಿಮಿಡಿತ ಅರಿತು ದಶಕಗಳ ಕಾಲ ಕಾವೇರಿ ನೀರಿಗಾಗಿ ಸುಪ್ರೀಂ ಕೋರ್ಟ್‌ನಲ್ಲಿ(Supreme Court) ವಾದ ಮಾಂಡಿಸಿದವರು ನಾರಿಮನ್‌ ಅವರು. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರು ಇಂದು ನವದೆಹಲಿಯಲ್ಲಿ (Delhi) ನಿಧನರಾಗಿದ್ದಾರೆ. 95 ವರ್ಷದ ನಾರಿಮನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಭಾರತ ಮಾತ್ರವಲ್ಲದೇ ಜಾಗತಿಕ ಕಾನೂನು ಕ್ಷೇತ್ರದಲ್ಲೂ ಅಪಾರ ಖ್ಯಾತಿಯನ್ನು ಗಳಿಸಿದ್ದರು. 1929ರ ಜನವರಿ 10 ರಂದು ಜನಿಸಿದ್ದ ನಾರಿಮನ್ ಅವರು 1971ರಿಂದ ಸುಪ್ರೀಂ ಕೋರ್ಟ್​ ಹಿರಿಯ ವಕೀಲರಾಗಿದ್ದರು. 1972ರ ಮೇ ತಿಂಗಳಿನಲ್ಲಿ ಅವರನ್ನು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಿಸಲಾಗಿತ್ತು. ಆದರೆ ಆಗಿನ ಪ್ರಧಾನಿ ಇಂದಿರಾಗಾಂಧಿ ಅವರು ಘೋಷಿಸಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ನಾರಿಮನ್ ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007 ರಲ್ಲಿ ಪದ್ಮ ವಿಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೌರವಿಸಲಾಗಿದೆ.

ಎಚ್​ಡಿಡಿ, ಮೋದಿ ಸೇರಿದಂತೆ ಗಣ್ಯರ ಸಂತಾಪ :ಫಾಲಿ ನಾರಿಮನ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. ನಾರಿಮನ್​ ಅವರ ಮಹೋನ್ನತ ಕಾನೂನು ಬುದ್ಧಿಜೀವಿಗಳಲ್ಲಿ ಒಬ್ಬರು. ಸಾಮಾನ್ಯ ನಾಗರಿಕರಿಗೆ ನ್ಯಾಯ ಸಿಗುವಂತೆ ಮಾಡಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಅಗಲಿಕೆಯಿಂದ ನನ್ನ ಮನಸ್ಸಿಗೆ ನೋವಾಗಿದೆ. ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಅವರ ಆತ್ಮಕೆ ಶಾಂತಿ ಸಿಗಲಿ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

ಇನ್ನು, ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅಗಲಿಕೆ ವಿಚಾರವನ್ನು ವಿಪಕ್ಷ ನಾಯಕ ಆರ್ ಅಶೋಕ್ ಅವರು ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪಿಸಿದ್ದು, ಈ ವೇಳೆ ಸಂತಾಪ ಸೂಚನೆ ನಿರ್ಣಯ ಮಂಡಿಸಿ ಚರ್ಚೆಗೆ ಅವಕಾಶ ಕೊಡೋದಾಗಿ ಸ್ಪೀಕರ್ ತಿಳಿಸಿದ್ದಾರೆ.
  • ಅಂತರ್ಜಾಲ ಮಾಹಿತಿ
Senior Supreme Court Advocate Fali S Nariman passed away today in New Delhi. Information is available that 95-year-old Nariman was suffering from age-related disease.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

50 minutes ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

18 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago