Advertisement
MIRROR FOCUS

ತುಂಗಾಭದ್ರಾ ಗೇಟ್‌ ರಿಪೇರಿಗೆ ಇನ್ನು 5 ದಿನ ಬೇಕು | ಪ್ರಯತ್ನ ವಿಫಲವಾದರೆ ಎಲ್ಲಾ 60 ಟಿಎಂಸಿ ನೀರು ಖಾಲಿ – ಸರ್ಕಾರಕ್ಕೆ ಅಧಿಕಾರಿಗಳ ಮಾಹಿತಿ

Share

ಉತ್ತರ ಕರ್ನಾಟಕದ ಬಹು ರೈತರ ಜೀವನಾಡಿಯಾಗಿದ್ದ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕಿತ್ತು ಹೋಗಿದೆ. ಇದನ್ನು ರಿಪೇರಿ ಮಾಡಬೇಕಾದರೆ ಡ್ಯಾಂನಲ್ಲಿ ಸಂಗ್ರಹವಾದ 25 ಟಿಎಂಸಿ ನೀರನ್ನು ಖಾಲಿ ಮಾಡಬೇಕಾದ ಅನಿವಾರ್ಯತೆ ಇದೆ. ಈ ಬಾರಿ ಮುಂಗಾರು ಚೆನ್ನಾಗಿ ಆದ ಪರಿಣಾಮ ತುಂಗಭದ್ರಾ ಡ್ಯಾಂ ಭರ್ತಿಯಾಗಿತ್ತು. ಆದರೆ ದುರಾದೃಷ್ಟವಶಾತ್‌ ಈ ದುರಂತ ನಡೆದ ಹಿನ್ನೆಲೆ ರೈತರ ಬದುಕಿಗೆ ಪೆಟ್ಟು ಕೊಟ್ಟಂತಾಗಿದೆ. ಇದೀಗ ಘಟನೆಯನ್ನು ಪರಿಶಶೀಲಿಸಿದ ಅಧಿಖಾರಿಗಳು ಐದು ದಿನಗಳೊಳಗೆ ಗೇಟ್ ರಿಪೇರಿ ಮಾಡಿ ಕೊಡುವುದಾಗಿ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ. ಭಾನುವಾರ ಸಂಜೆ ಆಂಧ್ರಪ್ರದೇಶ ಹಾಗೂ ಬೆಂಗಳೂರಿನಿಂದ ತಜ್ಞರ ತಂಡ ಆಗಮಿಸಿದೆ. ಎಲ್ಲಾ ಕ್ರಸ್ಟ್‌ ಗೇಟ್‌ (Crest Gate) ತೆರೆದ ಪರಿಣಾಮ ಸುತ್ತಮುತ್ತಲಿನ ಸೇತುವೆಗಳ ಪ್ರವೇಶ ಮೇಲೆ ನಿರ್ಬಂಧ ವಿಧಿಸಲಾಗಿದೆ.

ಅಪಾರ ಪ್ರಮಾಣದ ನೀರು ಹೊರಗಡೆ ಹೋಗುವುದನ್ನು ಹಾಗೂ ವೀಕ್ಷಣೆ ಮಾಡಲು ನರು ಕಿರು ಸೇತುವೆ ಸೇರಿದಂತೆ ಮುಖ್ಯ ಸೇತುವೆಗಳ ಮೇಲೆ ನಿಲ್ಲುತ್ತಿದ್ದರು. ಅಲ್ಲದೇ ನದಿಯ ಸೇತುವೆಯ ಮೇಲೆ ಸಹ ಜನರು ಹುಚ್ಚಾಟ ಮೆರೆಯುತ್ತಿದ್ದರು. ನಿನ್ನೆ ಡಿಸಿಎಂ ಡಿಕೆ. ಶಿವಕುಮಾರ್ (DK Shivakumar) ಅವರ ಸೂಚನೆಯಂತೆ ವಿಜಯನಗರ ಡಿಸಿ ಎಂಎಸ್ ದಿವಾಕರ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಮುಂದಿರುವ ಆಯ್ಕೆಗಳೇನು? : ಐದು ದಿನಗಳಲ್ಲಿ ಗೇಟ್ ರಿಪೇರಿ ಮಾಡುವುದಕ್ಕೆ ಸರ್ಕಾರ ಪ್ಲಾನ್‌ ಮಾಡಿಕೊಂಡಿದೆ. ಆರಂಭದಲ್ಲಿ 25 ಟಿಎಂಸಿ ನೀರು ಬಿಟ್ಟು, ಗೇಟ್ ಕೂಡಿಸಲು ಪ್ರಯತ್ನ ಮಾಡವುದು. ಈ ಪ್ರಯತ್ನ ವಿಫಲವಾದರೆ 40 ಟಿಎಂಸಿ ನೀರು ಹೊರಕ್ಕೆ ಬಿಡುವುದು. ಈ ಪ್ರಯತ್ನವೂ ಆಗದೇ ಇದ್ದರೆ ಅಂತಿಮವಾಗಿ 60 ಟಿಎಂಸಿ ನೀರು ಖಾಲಿ ಮಾಡಲಾಗುತ್ತದೆ. 60 ಟಿಎಂಸಿ ನೀರು ಖಾಲಿ ಮಾಡಿದರೆ ಗೇಟ್‌ ಅನ್ನು ಸುಲಭವಾಗಿ ಹಾಕಬಹುದು. ಈಗಾಗಲೇ ತಜ್ಞರ ಮೂಲಕ ಸಭೆ ನಡೆಸಿ, ಚರ್ಚೆ ನಡೆಸಿರುವ ಅಧಿಕಾರಿಗಳು ಒಳ ಹರಿವಿನ ಪ್ರಮಾಣ ನೋಡಿಕೊಂಡು ಹೊರ ಹರಿವು ಹೆಚ್ಚಿಸಲು ತೀರ್ಮಾನ ಮಾಡಲಾಗುತ್ತಿದೆ. ಎಂಥಹದ್ದೇ ಪರಿಸ್ಥಿತಿ ಎದುರಾದರೂ ಐದು ದಿನಗಳಲ್ಲಿ ಗೇಟ್ ರಿಪೇರಿ ಮುಗಿಸಿ, ಜನರಿಗೆ ಕೃಷಿ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಶತ ಪ್ರಯತ್ನ ಮಾಡಲಾಗುತ್ತಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

5 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

6 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

6 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

13 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

18 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

18 hours ago