Advertisement
MIRROR FOCUS

ತುಂಗಾಭದ್ರಾ ಗೇಟ್‌ ರಿಪೇರಿಗೆ ಇನ್ನು 5 ದಿನ ಬೇಕು | ಪ್ರಯತ್ನ ವಿಫಲವಾದರೆ ಎಲ್ಲಾ 60 ಟಿಎಂಸಿ ನೀರು ಖಾಲಿ – ಸರ್ಕಾರಕ್ಕೆ ಅಧಿಕಾರಿಗಳ ಮಾಹಿತಿ

Share

ಉತ್ತರ ಕರ್ನಾಟಕದ ಬಹು ರೈತರ ಜೀವನಾಡಿಯಾಗಿದ್ದ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕಿತ್ತು ಹೋಗಿದೆ. ಇದನ್ನು ರಿಪೇರಿ ಮಾಡಬೇಕಾದರೆ ಡ್ಯಾಂನಲ್ಲಿ ಸಂಗ್ರಹವಾದ 25 ಟಿಎಂಸಿ ನೀರನ್ನು ಖಾಲಿ ಮಾಡಬೇಕಾದ ಅನಿವಾರ್ಯತೆ ಇದೆ. ಈ ಬಾರಿ ಮುಂಗಾರು ಚೆನ್ನಾಗಿ ಆದ ಪರಿಣಾಮ ತುಂಗಭದ್ರಾ ಡ್ಯಾಂ ಭರ್ತಿಯಾಗಿತ್ತು. ಆದರೆ ದುರಾದೃಷ್ಟವಶಾತ್‌ ಈ ದುರಂತ ನಡೆದ ಹಿನ್ನೆಲೆ ರೈತರ ಬದುಕಿಗೆ ಪೆಟ್ಟು ಕೊಟ್ಟಂತಾಗಿದೆ. ಇದೀಗ ಘಟನೆಯನ್ನು ಪರಿಶಶೀಲಿಸಿದ ಅಧಿಖಾರಿಗಳು ಐದು ದಿನಗಳೊಳಗೆ ಗೇಟ್ ರಿಪೇರಿ ಮಾಡಿ ಕೊಡುವುದಾಗಿ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ. ಭಾನುವಾರ ಸಂಜೆ ಆಂಧ್ರಪ್ರದೇಶ ಹಾಗೂ ಬೆಂಗಳೂರಿನಿಂದ ತಜ್ಞರ ತಂಡ ಆಗಮಿಸಿದೆ. ಎಲ್ಲಾ ಕ್ರಸ್ಟ್‌ ಗೇಟ್‌ (Crest Gate) ತೆರೆದ ಪರಿಣಾಮ ಸುತ್ತಮುತ್ತಲಿನ ಸೇತುವೆಗಳ ಪ್ರವೇಶ ಮೇಲೆ ನಿರ್ಬಂಧ ವಿಧಿಸಲಾಗಿದೆ.

ಅಪಾರ ಪ್ರಮಾಣದ ನೀರು ಹೊರಗಡೆ ಹೋಗುವುದನ್ನು ಹಾಗೂ ವೀಕ್ಷಣೆ ಮಾಡಲು ನರು ಕಿರು ಸೇತುವೆ ಸೇರಿದಂತೆ ಮುಖ್ಯ ಸೇತುವೆಗಳ ಮೇಲೆ ನಿಲ್ಲುತ್ತಿದ್ದರು. ಅಲ್ಲದೇ ನದಿಯ ಸೇತುವೆಯ ಮೇಲೆ ಸಹ ಜನರು ಹುಚ್ಚಾಟ ಮೆರೆಯುತ್ತಿದ್ದರು. ನಿನ್ನೆ ಡಿಸಿಎಂ ಡಿಕೆ. ಶಿವಕುಮಾರ್ (DK Shivakumar) ಅವರ ಸೂಚನೆಯಂತೆ ವಿಜಯನಗರ ಡಿಸಿ ಎಂಎಸ್ ದಿವಾಕರ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಮುಂದಿರುವ ಆಯ್ಕೆಗಳೇನು? : ಐದು ದಿನಗಳಲ್ಲಿ ಗೇಟ್ ರಿಪೇರಿ ಮಾಡುವುದಕ್ಕೆ ಸರ್ಕಾರ ಪ್ಲಾನ್‌ ಮಾಡಿಕೊಂಡಿದೆ. ಆರಂಭದಲ್ಲಿ 25 ಟಿಎಂಸಿ ನೀರು ಬಿಟ್ಟು, ಗೇಟ್ ಕೂಡಿಸಲು ಪ್ರಯತ್ನ ಮಾಡವುದು. ಈ ಪ್ರಯತ್ನ ವಿಫಲವಾದರೆ 40 ಟಿಎಂಸಿ ನೀರು ಹೊರಕ್ಕೆ ಬಿಡುವುದು. ಈ ಪ್ರಯತ್ನವೂ ಆಗದೇ ಇದ್ದರೆ ಅಂತಿಮವಾಗಿ 60 ಟಿಎಂಸಿ ನೀರು ಖಾಲಿ ಮಾಡಲಾಗುತ್ತದೆ. 60 ಟಿಎಂಸಿ ನೀರು ಖಾಲಿ ಮಾಡಿದರೆ ಗೇಟ್‌ ಅನ್ನು ಸುಲಭವಾಗಿ ಹಾಕಬಹುದು. ಈಗಾಗಲೇ ತಜ್ಞರ ಮೂಲಕ ಸಭೆ ನಡೆಸಿ, ಚರ್ಚೆ ನಡೆಸಿರುವ ಅಧಿಕಾರಿಗಳು ಒಳ ಹರಿವಿನ ಪ್ರಮಾಣ ನೋಡಿಕೊಂಡು ಹೊರ ಹರಿವು ಹೆಚ್ಚಿಸಲು ತೀರ್ಮಾನ ಮಾಡಲಾಗುತ್ತಿದೆ. ಎಂಥಹದ್ದೇ ಪರಿಸ್ಥಿತಿ ಎದುರಾದರೂ ಐದು ದಿನಗಳಲ್ಲಿ ಗೇಟ್ ರಿಪೇರಿ ಮುಗಿಸಿ, ಜನರಿಗೆ ಕೃಷಿ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಶತ ಪ್ರಯತ್ನ ಮಾಡಲಾಗುತ್ತಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

17 minutes ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

20 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

21 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago