Advertisement
MIRROR FOCUS

ತುಂಗಾಭದ್ರಾ ಗೇಟ್‌ ರಿಪೇರಿಗೆ ಇನ್ನು 5 ದಿನ ಬೇಕು | ಪ್ರಯತ್ನ ವಿಫಲವಾದರೆ ಎಲ್ಲಾ 60 ಟಿಎಂಸಿ ನೀರು ಖಾಲಿ – ಸರ್ಕಾರಕ್ಕೆ ಅಧಿಕಾರಿಗಳ ಮಾಹಿತಿ

Share

ಉತ್ತರ ಕರ್ನಾಟಕದ ಬಹು ರೈತರ ಜೀವನಾಡಿಯಾಗಿದ್ದ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕಿತ್ತು ಹೋಗಿದೆ. ಇದನ್ನು ರಿಪೇರಿ ಮಾಡಬೇಕಾದರೆ ಡ್ಯಾಂನಲ್ಲಿ ಸಂಗ್ರಹವಾದ 25 ಟಿಎಂಸಿ ನೀರನ್ನು ಖಾಲಿ ಮಾಡಬೇಕಾದ ಅನಿವಾರ್ಯತೆ ಇದೆ. ಈ ಬಾರಿ ಮುಂಗಾರು ಚೆನ್ನಾಗಿ ಆದ ಪರಿಣಾಮ ತುಂಗಭದ್ರಾ ಡ್ಯಾಂ ಭರ್ತಿಯಾಗಿತ್ತು. ಆದರೆ ದುರಾದೃಷ್ಟವಶಾತ್‌ ಈ ದುರಂತ ನಡೆದ ಹಿನ್ನೆಲೆ ರೈತರ ಬದುಕಿಗೆ ಪೆಟ್ಟು ಕೊಟ್ಟಂತಾಗಿದೆ. ಇದೀಗ ಘಟನೆಯನ್ನು ಪರಿಶಶೀಲಿಸಿದ ಅಧಿಖಾರಿಗಳು ಐದು ದಿನಗಳೊಳಗೆ ಗೇಟ್ ರಿಪೇರಿ ಮಾಡಿ ಕೊಡುವುದಾಗಿ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ. ಭಾನುವಾರ ಸಂಜೆ ಆಂಧ್ರಪ್ರದೇಶ ಹಾಗೂ ಬೆಂಗಳೂರಿನಿಂದ ತಜ್ಞರ ತಂಡ ಆಗಮಿಸಿದೆ. ಎಲ್ಲಾ ಕ್ರಸ್ಟ್‌ ಗೇಟ್‌ (Crest Gate) ತೆರೆದ ಪರಿಣಾಮ ಸುತ್ತಮುತ್ತಲಿನ ಸೇತುವೆಗಳ ಪ್ರವೇಶ ಮೇಲೆ ನಿರ್ಬಂಧ ವಿಧಿಸಲಾಗಿದೆ.

ಅಪಾರ ಪ್ರಮಾಣದ ನೀರು ಹೊರಗಡೆ ಹೋಗುವುದನ್ನು ಹಾಗೂ ವೀಕ್ಷಣೆ ಮಾಡಲು ನರು ಕಿರು ಸೇತುವೆ ಸೇರಿದಂತೆ ಮುಖ್ಯ ಸೇತುವೆಗಳ ಮೇಲೆ ನಿಲ್ಲುತ್ತಿದ್ದರು. ಅಲ್ಲದೇ ನದಿಯ ಸೇತುವೆಯ ಮೇಲೆ ಸಹ ಜನರು ಹುಚ್ಚಾಟ ಮೆರೆಯುತ್ತಿದ್ದರು. ನಿನ್ನೆ ಡಿಸಿಎಂ ಡಿಕೆ. ಶಿವಕುಮಾರ್ (DK Shivakumar) ಅವರ ಸೂಚನೆಯಂತೆ ವಿಜಯನಗರ ಡಿಸಿ ಎಂಎಸ್ ದಿವಾಕರ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಮುಂದಿರುವ ಆಯ್ಕೆಗಳೇನು? : ಐದು ದಿನಗಳಲ್ಲಿ ಗೇಟ್ ರಿಪೇರಿ ಮಾಡುವುದಕ್ಕೆ ಸರ್ಕಾರ ಪ್ಲಾನ್‌ ಮಾಡಿಕೊಂಡಿದೆ. ಆರಂಭದಲ್ಲಿ 25 ಟಿಎಂಸಿ ನೀರು ಬಿಟ್ಟು, ಗೇಟ್ ಕೂಡಿಸಲು ಪ್ರಯತ್ನ ಮಾಡವುದು. ಈ ಪ್ರಯತ್ನ ವಿಫಲವಾದರೆ 40 ಟಿಎಂಸಿ ನೀರು ಹೊರಕ್ಕೆ ಬಿಡುವುದು. ಈ ಪ್ರಯತ್ನವೂ ಆಗದೇ ಇದ್ದರೆ ಅಂತಿಮವಾಗಿ 60 ಟಿಎಂಸಿ ನೀರು ಖಾಲಿ ಮಾಡಲಾಗುತ್ತದೆ. 60 ಟಿಎಂಸಿ ನೀರು ಖಾಲಿ ಮಾಡಿದರೆ ಗೇಟ್‌ ಅನ್ನು ಸುಲಭವಾಗಿ ಹಾಕಬಹುದು. ಈಗಾಗಲೇ ತಜ್ಞರ ಮೂಲಕ ಸಭೆ ನಡೆಸಿ, ಚರ್ಚೆ ನಡೆಸಿರುವ ಅಧಿಕಾರಿಗಳು ಒಳ ಹರಿವಿನ ಪ್ರಮಾಣ ನೋಡಿಕೊಂಡು ಹೊರ ಹರಿವು ಹೆಚ್ಚಿಸಲು ತೀರ್ಮಾನ ಮಾಡಲಾಗುತ್ತಿದೆ. ಎಂಥಹದ್ದೇ ಪರಿಸ್ಥಿತಿ ಎದುರಾದರೂ ಐದು ದಿನಗಳಲ್ಲಿ ಗೇಟ್ ರಿಪೇರಿ ಮುಗಿಸಿ, ಜನರಿಗೆ ಕೃಷಿ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಶತ ಪ್ರಯತ್ನ ಮಾಡಲಾಗುತ್ತಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

2 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

3 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

3 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

7 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

7 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

18 hours ago