ಉತ್ತರ ಕರ್ನಾಟಕದ ಬಹು ರೈತರ ಜೀವನಾಡಿಯಾಗಿದ್ದ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕಿತ್ತು ಹೋಗಿದೆ. ಇದನ್ನು ರಿಪೇರಿ ಮಾಡಬೇಕಾದರೆ ಡ್ಯಾಂನಲ್ಲಿ ಸಂಗ್ರಹವಾದ 25 ಟಿಎಂಸಿ ನೀರನ್ನು ಖಾಲಿ ಮಾಡಬೇಕಾದ ಅನಿವಾರ್ಯತೆ ಇದೆ. ಈ ಬಾರಿ ಮುಂಗಾರು ಚೆನ್ನಾಗಿ ಆದ ಪರಿಣಾಮ ತುಂಗಭದ್ರಾ ಡ್ಯಾಂ ಭರ್ತಿಯಾಗಿತ್ತು. ಆದರೆ ದುರಾದೃಷ್ಟವಶಾತ್ ಈ ದುರಂತ ನಡೆದ ಹಿನ್ನೆಲೆ ರೈತರ ಬದುಕಿಗೆ ಪೆಟ್ಟು ಕೊಟ್ಟಂತಾಗಿದೆ. ಇದೀಗ ಘಟನೆಯನ್ನು ಪರಿಶಶೀಲಿಸಿದ ಅಧಿಖಾರಿಗಳು ಐದು ದಿನಗಳೊಳಗೆ ಗೇಟ್ ರಿಪೇರಿ ಮಾಡಿ ಕೊಡುವುದಾಗಿ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ. ಭಾನುವಾರ ಸಂಜೆ ಆಂಧ್ರಪ್ರದೇಶ ಹಾಗೂ ಬೆಂಗಳೂರಿನಿಂದ ತಜ್ಞರ ತಂಡ ಆಗಮಿಸಿದೆ. ಎಲ್ಲಾ ಕ್ರಸ್ಟ್ ಗೇಟ್ (Crest Gate) ತೆರೆದ ಪರಿಣಾಮ ಸುತ್ತಮುತ್ತಲಿನ ಸೇತುವೆಗಳ ಪ್ರವೇಶ ಮೇಲೆ ನಿರ್ಬಂಧ ವಿಧಿಸಲಾಗಿದೆ.
ಸರ್ಕಾರದ ಮುಂದಿರುವ ಆಯ್ಕೆಗಳೇನು? : ಐದು ದಿನಗಳಲ್ಲಿ ಗೇಟ್ ರಿಪೇರಿ ಮಾಡುವುದಕ್ಕೆ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಆರಂಭದಲ್ಲಿ 25 ಟಿಎಂಸಿ ನೀರು ಬಿಟ್ಟು, ಗೇಟ್ ಕೂಡಿಸಲು ಪ್ರಯತ್ನ ಮಾಡವುದು. ಈ ಪ್ರಯತ್ನ ವಿಫಲವಾದರೆ 40 ಟಿಎಂಸಿ ನೀರು ಹೊರಕ್ಕೆ ಬಿಡುವುದು. ಈ ಪ್ರಯತ್ನವೂ ಆಗದೇ ಇದ್ದರೆ ಅಂತಿಮವಾಗಿ 60 ಟಿಎಂಸಿ ನೀರು ಖಾಲಿ ಮಾಡಲಾಗುತ್ತದೆ. 60 ಟಿಎಂಸಿ ನೀರು ಖಾಲಿ ಮಾಡಿದರೆ ಗೇಟ್ ಅನ್ನು ಸುಲಭವಾಗಿ ಹಾಕಬಹುದು. ಈಗಾಗಲೇ ತಜ್ಞರ ಮೂಲಕ ಸಭೆ ನಡೆಸಿ, ಚರ್ಚೆ ನಡೆಸಿರುವ ಅಧಿಕಾರಿಗಳು ಒಳ ಹರಿವಿನ ಪ್ರಮಾಣ ನೋಡಿಕೊಂಡು ಹೊರ ಹರಿವು ಹೆಚ್ಚಿಸಲು ತೀರ್ಮಾನ ಮಾಡಲಾಗುತ್ತಿದೆ. ಎಂಥಹದ್ದೇ ಪರಿಸ್ಥಿತಿ ಎದುರಾದರೂ ಐದು ದಿನಗಳಲ್ಲಿ ಗೇಟ್ ರಿಪೇರಿ ಮುಗಿಸಿ, ಜನರಿಗೆ ಕೃಷಿ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಶತ ಪ್ರಯತ್ನ ಮಾಡಲಾಗುತ್ತಿದೆ.
– ಅಂತರ್ಜಾಲ ಮಾಹಿತಿ
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…