ಗಣರಾಜ್ಯೋತ್ಸವ ಪರೇಡ್ ಟ್ಯಾಬ್ಲೋದಲ್ಲಿ ಕಸೂತಿ ಪ್ರದರ್ಶನದಲ್ಲಿ ಕಾಣಿಸಿಕೊಳ್ಳಲಿರುವವರು ಸಂಡೂರಿನ ಲಂಬಾಣಿ ಮಹಿಳೆಯರು

January 24, 2022
9:22 PM

ಮುಂಬರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಂಡೂರಿನ ಲಂಬಾಣಿ ಮಹಿಳೆಯರ ಕಲೆ ಮತ್ತು ಕಸೂತಿ ಕಲಾಕೃತಿಗಳನ್ನು ಹೊಸದಿಲ್ಲಿಯಲ್ಲಿ ಪ್ರದರ್ಶಿಸಲಾಗುವುದು. ಬಳ್ಳಾರಿ ಜಿಲ್ಲೆಯ ಮಲೆನಾಡಿನ ಕುಶಲಕರ್ಮಿಗಳು ಈ ಘೋಷಣೆಯಿಂದ ಸಂತಸಗೊಂಡಿದ್ದಾರೆ.

ಬಟ್ಟೆಗಳು, ಸೀರೆ ,ಶಾಲುಗಳು ಮೇಲೆ ಲಂಬಾಣಿ ಮಹಿಳೆಯರ ಉತ್ತಮ ಕಸೂತಿ ಕೆಲಸಗಳಿಗೆ ಜಾಗತಿಕವಾಗಿ ಮಾರುಕಟ್ಟೆ ಲಭ್ಯವಿದ್ದು, ದಿಂಗತ ರಾಜಕಾರಣಿ, ಸಂಡೂರು ರಾಜಮನೆತನದ ಎಂ ವೈ ಘೋರ್ಪಡೆ ಅವರು ಸಂಡೂರು ಕುಶಲ ಕಲಾ ಕೇಂದ್ರ ಎಂಬ ಸ್ವ- ಸಹಾಯ ತಂಡವನ್ನು ಸ್ಥಾಪಿಸಿದ್ದರು. ಕಳೆದ ಹಲವಾರು ವರ್ಷಗಳಿದ ಲಂಬಾಣಿ ಮಹಿಳೆಯರು ಈ ಕಲೆಯನ್ನು ರಕ್ಷಣೆ ಮಾಡುತ್ತಿದ್ದಾರೆ. ಲಂಬಾಣಿ ಮಹಿಳೆಯರಿಗೆ ಉತ್ತಮ ಬೇಡಿಕೆಯಿರುವ ಬಟ್ಟೆಗಳ ಮೇಲೆ ಕಸೂತಿ ರಚಿಸಲು ತರಬೇತಿಯನ್ನೂ ನೀಡಲಾಗುತ್ತಿತ್ತು. ಇದು ಹೆಮ್ಮೆಯ ಆಂದೋಲನವಾಗಿದೆ. ರಾಜ್ಯದ ಇತರ ಭಾಗಗಳ ವಿವಿಧ ಕಲಾಕೃತಿಗಳೊಂದಿಗೆ ನಮ್ಮ ರಾಜ್ಯದ ಕಲೆಯನ್ನು ಹಂಚಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಕುಶಲಕರ್ಮಿ ಮಹಿಳೆ ಇದೇ ವೇಳೆ ಹೇಳಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror