ಮುಂಬರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಸಂಡೂರಿನ ಲಂಬಾಣಿ ಮಹಿಳೆಯರ ಕಲೆ ಮತ್ತು ಕಸೂತಿ ಕಲಾಕೃತಿಗಳನ್ನು ಹೊಸದಿಲ್ಲಿಯಲ್ಲಿ ಪ್ರದರ್ಶಿಸಲಾಗುವುದು. ಬಳ್ಳಾರಿ ಜಿಲ್ಲೆಯ ಮಲೆನಾಡಿನ ಕುಶಲಕರ್ಮಿಗಳು ಈ ಘೋಷಣೆಯಿಂದ ಸಂತಸಗೊಂಡಿದ್ದಾರೆ.
ಬಟ್ಟೆಗಳು, ಸೀರೆ ,ಶಾಲುಗಳು ಮೇಲೆ ಲಂಬಾಣಿ ಮಹಿಳೆಯರ ಉತ್ತಮ ಕಸೂತಿ ಕೆಲಸಗಳಿಗೆ ಜಾಗತಿಕವಾಗಿ ಮಾರುಕಟ್ಟೆ ಲಭ್ಯವಿದ್ದು, ದಿಂಗತ ರಾಜಕಾರಣಿ, ಸಂಡೂರು ರಾಜಮನೆತನದ ಎಂ ವೈ ಘೋರ್ಪಡೆ ಅವರು ಸಂಡೂರು ಕುಶಲ ಕಲಾ ಕೇಂದ್ರ ಎಂಬ ಸ್ವ- ಸಹಾಯ ತಂಡವನ್ನು ಸ್ಥಾಪಿಸಿದ್ದರು. ಕಳೆದ ಹಲವಾರು ವರ್ಷಗಳಿದ ಲಂಬಾಣಿ ಮಹಿಳೆಯರು ಈ ಕಲೆಯನ್ನು ರಕ್ಷಣೆ ಮಾಡುತ್ತಿದ್ದಾರೆ. ಲಂಬಾಣಿ ಮಹಿಳೆಯರಿಗೆ ಉತ್ತಮ ಬೇಡಿಕೆಯಿರುವ ಬಟ್ಟೆಗಳ ಮೇಲೆ ಕಸೂತಿ ರಚಿಸಲು ತರಬೇತಿಯನ್ನೂ ನೀಡಲಾಗುತ್ತಿತ್ತು. ಇದು ಹೆಮ್ಮೆಯ ಆಂದೋಲನವಾಗಿದೆ. ರಾಜ್ಯದ ಇತರ ಭಾಗಗಳ ವಿವಿಧ ಕಲಾಕೃತಿಗಳೊಂದಿಗೆ ನಮ್ಮ ರಾಜ್ಯದ ಕಲೆಯನ್ನು ಹಂಚಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಕುಶಲಕರ್ಮಿ ಮಹಿಳೆ ಇದೇ ವೇಳೆ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…