ರಾಜ್ಯದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಈ ಕಾಯಿಲೆ ಗುಣಪಡಿಸಲು 17.5 ಕೋಟಿ ರೂಪಾಯಿ ಬೆಲೆಯ ಔಷಧಿಯೊಂದು ವಿದೇಶದಿಂದ ಆಮದಾಗಬೇಕಿದೆ. ಇದಕ್ಕಾಗಿ ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಧಾನಿ ನರೇಂದ್ರ ಅವರಿಗೆ ಮನವಿ ಮಾಡಿದ್ದಾರೆ.
ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’(Spinal Muscular Atrophy) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದೆ. ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್ಎಂಎ) ಎಂಬ ಈ ರೋಗವು ಮಾರಣಾಂತಿಕವಾಗಿದೆ.ಅದರ ಏಕೈಕ ಲಸಿಕೆಯನ್ನು ಅಮೆರಿಕದಲ್ಲಿ ಮಾತ್ರ ತಯಾರಿಸಲಾಗುತ್ತದೆ. ಅದರ ಬೆಲೆ ರೂ. 17.5 ಕೋಟಿ ಇದೆ. ಈ ಚುಚ್ಚು ಮದ್ದನ್ನು 2 ವರ್ಷಗಳವರೆಗೆ ಮಾತ್ರ ನೀಡಬಹುದು. ಅಂದರೆ, ಎರಡು ವರ್ಷಕ್ಕಿಂತ ಮೊದಲು ಈ ಚುಚ್ಚು ಮದ್ದನ್ನು ನೀಡಿದರೆ ಮಾತ್ರ ಪ್ರಯೋಜನವಿದೆ. ಈ ರೋಗವು ವಿಶ್ವದ 10 ಸಾವಿರ ಮಕ್ಕಳಲ್ಲಿ ಒಬ್ಬರಲ್ಲಿ ಮಾತ್ರ ಕಂಡು ಬರುತ್ತದೆ ಎಂದು ವೈದ್ಯರು ಹೇಳುತ್ತಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…