ರಾಜ್ಯದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಈ ಕಾಯಿಲೆ ಗುಣಪಡಿಸಲು 17.5 ಕೋಟಿ ರೂಪಾಯಿ ಬೆಲೆಯ ಔಷಧಿಯೊಂದು ವಿದೇಶದಿಂದ ಆಮದಾಗಬೇಕಿದೆ. ಇದಕ್ಕಾಗಿ ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಧಾನಿ ನರೇಂದ್ರ ಅವರಿಗೆ ಮನವಿ ಮಾಡಿದ್ದಾರೆ.
ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’(Spinal Muscular Atrophy) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದೆ. ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್ಎಂಎ) ಎಂಬ ಈ ರೋಗವು ಮಾರಣಾಂತಿಕವಾಗಿದೆ.ಅದರ ಏಕೈಕ ಲಸಿಕೆಯನ್ನು ಅಮೆರಿಕದಲ್ಲಿ ಮಾತ್ರ ತಯಾರಿಸಲಾಗುತ್ತದೆ. ಅದರ ಬೆಲೆ ರೂ. 17.5 ಕೋಟಿ ಇದೆ. ಈ ಚುಚ್ಚು ಮದ್ದನ್ನು 2 ವರ್ಷಗಳವರೆಗೆ ಮಾತ್ರ ನೀಡಬಹುದು. ಅಂದರೆ, ಎರಡು ವರ್ಷಕ್ಕಿಂತ ಮೊದಲು ಈ ಚುಚ್ಚು ಮದ್ದನ್ನು ನೀಡಿದರೆ ಮಾತ್ರ ಪ್ರಯೋಜನವಿದೆ. ಈ ರೋಗವು ವಿಶ್ವದ 10 ಸಾವಿರ ಮಕ್ಕಳಲ್ಲಿ ಒಬ್ಬರಲ್ಲಿ ಮಾತ್ರ ಕಂಡು ಬರುತ್ತದೆ ಎಂದು ವೈದ್ಯರು ಹೇಳುತ್ತಾರೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…