ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |

October 25, 2023
7:59 PM
ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ಕಡಬದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಕಾಡಾನೆ(Elephent) ಹಾಗೂ ಕಾಡು ಪ್ರಾಣಿಗಳ (Wild Animals) ಕಾಟವು ಹೆಚ್ಚಾಗಿದೆ. ಕೃಷಿ ಹಾಗೂ ಕೃಷಿಕನ ಮೇಲೆ ನಿರಂತರ ಸಮಸ್ಯೆಯಾಗುತ್ತಿದೆ.ಆದರೂ ಯಾವುದೇ ಪರಿಹಾರ ಇಲ್ಲ. ಹೀಗಾಗಿ ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆಗೆ ಸಿದ್ಧತೆ ನಡೆದಿದೆ.
ಕಾಡಾನೆ ಹಾವಳಿ ತಪ್ಪಿಸಿ…. ಎಂದು ಜಾಗೃತ ರೈತ ಕುಟುಂಬಗಳ ಒಕ್ಕೂಟ ನೇತೃತ್ವದಲ್ಲಿ ಬೃಹತ್‌ ರೈತ ಹಕ್ಕೊತ್ತಾಯ ನಡೆಯಲಿದೆ. ಅ.26 ರಂದು ಕಡಬದ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಿಂದ ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ನಡೆಯಲಿದೆ. ಕೃಷಿಕರಿಗೆ  “ಖಾಯಂ” ಪರಿಹಾರದ ಹಕ್ಕೊತ್ತಾಯಕ್ಕಾಗಿ ಸರಕಾರದ ಗಮನ ತರುವ ದೃಷ್ಟಿಯಿಂದ ಕಡಬ ಪೇಟೆಯಲ್ಲಿ “ರೈತ ಹಕ್ಕೊತ್ತಾಯ ಬೃಹತ್ ಮೆರವಣಿಗೆ” ನಡೆಸಲಾಗುತ್ತಿದೆ.ಸ್ಥಳಿಯ ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ರಾಜಕೀಯ ರಹಿತವಾಗಿ ಈ ಹಕ್ಕೊತ್ತಾಯ ಮೆರವಣಿಗೆ ನಡೆಯಲಿದೆ.
ಪ್ರಮುಖವಾಗಿ ಕಾಡಾನೆಗಳ ಸ್ಥಳಾಂತರ ಮತ್ತು ಶಾಶ್ವತವಾಗಿ ತಡೆಬೇಲಿ ರಚನೆ, ಕಾಡಾನೆ ದಾಳಿ ಸಮಯದಲ್ಲಿ ಪ್ರಾಣಹಾನಿ ಸೇರಿದಂತೆ ಆರೋಗ್ಯಕ್ಕೆ ಎದುರಾಗುತ್ತಿರುವ ತೊಂದರೆಗಳು ಮತ್ತು ಕೃಷಿ ನಾಶಕ್ಕೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಈ ಮೆರವಣಿಗೆ ನಡೆಯಲಿದೆ.ಇದಕ್ಕೆ ಸರಕಾರ ವಿಫಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆಗಳು ಹಾಗೂ ರಸ್ತೆ ತಡೆಯಂತಹ ಧರಣಿಗಳೂ ನಡೆಸಲಾಗುತ್ತದೆ ಎಂದು ಸಾರ್ವಜನಿಕರು  ಎಚ್ಚರಿಸಿದ್ದಾರೆ.
In most of the villages of Kadaba Taluk of Dakshina Kannada district, elephant and wild animals have increased. There is a constant problem on agriculture and the farmer, but there is no solution. Therefore, preparations have been made for a huge farmer’s rights march demanding a permanent solution.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ
ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror