MIRROR FOCUS

ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಕಾಡಾನೆ(Elephent) ಹಾಗೂ ಕಾಡು ಪ್ರಾಣಿಗಳ (Wild Animals) ಕಾಟವು ಹೆಚ್ಚಾಗಿದೆ. ಕೃಷಿ ಹಾಗೂ ಕೃಷಿಕನ ಮೇಲೆ ನಿರಂತರ ಸಮಸ್ಯೆಯಾಗುತ್ತಿದೆ.ಆದರೂ ಯಾವುದೇ ಪರಿಹಾರ ಇಲ್ಲ. ಹೀಗಾಗಿ ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆಗೆ ಸಿದ್ಧತೆ ನಡೆದಿದೆ.
ಕಾಡಾನೆ ಹಾವಳಿ ತಪ್ಪಿಸಿ…. ಎಂದು ಜಾಗೃತ ರೈತ ಕುಟುಂಬಗಳ ಒಕ್ಕೂಟ ನೇತೃತ್ವದಲ್ಲಿ ಬೃಹತ್‌ ರೈತ ಹಕ್ಕೊತ್ತಾಯ ನಡೆಯಲಿದೆ. ಅ.26 ರಂದು ಕಡಬದ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಿಂದ ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ನಡೆಯಲಿದೆ. ಕೃಷಿಕರಿಗೆ  “ಖಾಯಂ” ಪರಿಹಾರದ ಹಕ್ಕೊತ್ತಾಯಕ್ಕಾಗಿ ಸರಕಾರದ ಗಮನ ತರುವ ದೃಷ್ಟಿಯಿಂದ ಕಡಬ ಪೇಟೆಯಲ್ಲಿ “ರೈತ ಹಕ್ಕೊತ್ತಾಯ ಬೃಹತ್ ಮೆರವಣಿಗೆ” ನಡೆಸಲಾಗುತ್ತಿದೆ.ಸ್ಥಳಿಯ ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ರಾಜಕೀಯ ರಹಿತವಾಗಿ ಈ ಹಕ್ಕೊತ್ತಾಯ ಮೆರವಣಿಗೆ ನಡೆಯಲಿದೆ.
ಪ್ರಮುಖವಾಗಿ ಕಾಡಾನೆಗಳ ಸ್ಥಳಾಂತರ ಮತ್ತು ಶಾಶ್ವತವಾಗಿ ತಡೆಬೇಲಿ ರಚನೆ, ಕಾಡಾನೆ ದಾಳಿ ಸಮಯದಲ್ಲಿ ಪ್ರಾಣಹಾನಿ ಸೇರಿದಂತೆ ಆರೋಗ್ಯಕ್ಕೆ ಎದುರಾಗುತ್ತಿರುವ ತೊಂದರೆಗಳು ಮತ್ತು ಕೃಷಿ ನಾಶಕ್ಕೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಈ ಮೆರವಣಿಗೆ ನಡೆಯಲಿದೆ.ಇದಕ್ಕೆ ಸರಕಾರ ವಿಫಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆಗಳು ಹಾಗೂ ರಸ್ತೆ ತಡೆಯಂತಹ ಧರಣಿಗಳೂ ನಡೆಸಲಾಗುತ್ತದೆ ಎಂದು ಸಾರ್ವಜನಿಕರು  ಎಚ್ಚರಿಸಿದ್ದಾರೆ.
In most of the villages of Kadaba Taluk of Dakshina Kannada district, elephant and wild animals have increased. There is a constant problem on agriculture and the farmer, but there is no solution. Therefore, preparations have been made for a huge farmer’s rights march demanding a permanent solution.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

8 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

9 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

17 hours ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

1 day ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

1 day ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago