Advertisement
MIRROR FOCUS

ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |

Share
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಕಾಡಾನೆ(Elephent) ಹಾಗೂ ಕಾಡು ಪ್ರಾಣಿಗಳ (Wild Animals) ಕಾಟವು ಹೆಚ್ಚಾಗಿದೆ. ಕೃಷಿ ಹಾಗೂ ಕೃಷಿಕನ ಮೇಲೆ ನಿರಂತರ ಸಮಸ್ಯೆಯಾಗುತ್ತಿದೆ.ಆದರೂ ಯಾವುದೇ ಪರಿಹಾರ ಇಲ್ಲ. ಹೀಗಾಗಿ ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆಗೆ ಸಿದ್ಧತೆ ನಡೆದಿದೆ.
ಕಾಡಾನೆ ಹಾವಳಿ ತಪ್ಪಿಸಿ…. ಎಂದು ಜಾಗೃತ ರೈತ ಕುಟುಂಬಗಳ ಒಕ್ಕೂಟ ನೇತೃತ್ವದಲ್ಲಿ ಬೃಹತ್‌ ರೈತ ಹಕ್ಕೊತ್ತಾಯ ನಡೆಯಲಿದೆ. ಅ.26 ರಂದು ಕಡಬದ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಿಂದ ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ನಡೆಯಲಿದೆ. ಕೃಷಿಕರಿಗೆ  “ಖಾಯಂ” ಪರಿಹಾರದ ಹಕ್ಕೊತ್ತಾಯಕ್ಕಾಗಿ ಸರಕಾರದ ಗಮನ ತರುವ ದೃಷ್ಟಿಯಿಂದ ಕಡಬ ಪೇಟೆಯಲ್ಲಿ “ರೈತ ಹಕ್ಕೊತ್ತಾಯ ಬೃಹತ್ ಮೆರವಣಿಗೆ” ನಡೆಸಲಾಗುತ್ತಿದೆ.ಸ್ಥಳಿಯ ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ರಾಜಕೀಯ ರಹಿತವಾಗಿ ಈ ಹಕ್ಕೊತ್ತಾಯ ಮೆರವಣಿಗೆ ನಡೆಯಲಿದೆ.
ಪ್ರಮುಖವಾಗಿ ಕಾಡಾನೆಗಳ ಸ್ಥಳಾಂತರ ಮತ್ತು ಶಾಶ್ವತವಾಗಿ ತಡೆಬೇಲಿ ರಚನೆ, ಕಾಡಾನೆ ದಾಳಿ ಸಮಯದಲ್ಲಿ ಪ್ರಾಣಹಾನಿ ಸೇರಿದಂತೆ ಆರೋಗ್ಯಕ್ಕೆ ಎದುರಾಗುತ್ತಿರುವ ತೊಂದರೆಗಳು ಮತ್ತು ಕೃಷಿ ನಾಶಕ್ಕೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಈ ಮೆರವಣಿಗೆ ನಡೆಯಲಿದೆ.ಇದಕ್ಕೆ ಸರಕಾರ ವಿಫಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆಗಳು ಹಾಗೂ ರಸ್ತೆ ತಡೆಯಂತಹ ಧರಣಿಗಳೂ ನಡೆಸಲಾಗುತ್ತದೆ ಎಂದು ಸಾರ್ವಜನಿಕರು  ಎಚ್ಚರಿಸಿದ್ದಾರೆ.
In most of the villages of Kadaba Taluk of Dakshina Kannada district, elephant and wild animals have increased. There is a constant problem on agriculture and the farmer, but there is no solution. Therefore, preparations have been made for a huge farmer’s rights march demanding a permanent solution.
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

9 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

9 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

9 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

9 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

12 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

13 hours ago