Advertisement
MIRROR FOCUS

ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |

Share
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಕಾಡಾನೆ(Elephent) ಹಾಗೂ ಕಾಡು ಪ್ರಾಣಿಗಳ (Wild Animals) ಕಾಟವು ಹೆಚ್ಚಾಗಿದೆ. ಕೃಷಿ ಹಾಗೂ ಕೃಷಿಕನ ಮೇಲೆ ನಿರಂತರ ಸಮಸ್ಯೆಯಾಗುತ್ತಿದೆ.ಆದರೂ ಯಾವುದೇ ಪರಿಹಾರ ಇಲ್ಲ. ಹೀಗಾಗಿ ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆಗೆ ಸಿದ್ಧತೆ ನಡೆದಿದೆ.
ಕಾಡಾನೆ ಹಾವಳಿ ತಪ್ಪಿಸಿ…. ಎಂದು ಜಾಗೃತ ರೈತ ಕುಟುಂಬಗಳ ಒಕ್ಕೂಟ ನೇತೃತ್ವದಲ್ಲಿ ಬೃಹತ್‌ ರೈತ ಹಕ್ಕೊತ್ತಾಯ ನಡೆಯಲಿದೆ. ಅ.26 ರಂದು ಕಡಬದ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಿಂದ ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ನಡೆಯಲಿದೆ. ಕೃಷಿಕರಿಗೆ  “ಖಾಯಂ” ಪರಿಹಾರದ ಹಕ್ಕೊತ್ತಾಯಕ್ಕಾಗಿ ಸರಕಾರದ ಗಮನ ತರುವ ದೃಷ್ಟಿಯಿಂದ ಕಡಬ ಪೇಟೆಯಲ್ಲಿ “ರೈತ ಹಕ್ಕೊತ್ತಾಯ ಬೃಹತ್ ಮೆರವಣಿಗೆ” ನಡೆಸಲಾಗುತ್ತಿದೆ.ಸ್ಥಳಿಯ ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ರಾಜಕೀಯ ರಹಿತವಾಗಿ ಈ ಹಕ್ಕೊತ್ತಾಯ ಮೆರವಣಿಗೆ ನಡೆಯಲಿದೆ.
ಪ್ರಮುಖವಾಗಿ ಕಾಡಾನೆಗಳ ಸ್ಥಳಾಂತರ ಮತ್ತು ಶಾಶ್ವತವಾಗಿ ತಡೆಬೇಲಿ ರಚನೆ, ಕಾಡಾನೆ ದಾಳಿ ಸಮಯದಲ್ಲಿ ಪ್ರಾಣಹಾನಿ ಸೇರಿದಂತೆ ಆರೋಗ್ಯಕ್ಕೆ ಎದುರಾಗುತ್ತಿರುವ ತೊಂದರೆಗಳು ಮತ್ತು ಕೃಷಿ ನಾಶಕ್ಕೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಈ ಮೆರವಣಿಗೆ ನಡೆಯಲಿದೆ.ಇದಕ್ಕೆ ಸರಕಾರ ವಿಫಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆಗಳು ಹಾಗೂ ರಸ್ತೆ ತಡೆಯಂತಹ ಧರಣಿಗಳೂ ನಡೆಸಲಾಗುತ್ತದೆ ಎಂದು ಸಾರ್ವಜನಿಕರು  ಎಚ್ಚರಿಸಿದ್ದಾರೆ.
In most of the villages of Kadaba Taluk of Dakshina Kannada district, elephant and wild animals have increased. There is a constant problem on agriculture and the farmer, but there is no solution. Therefore, preparations have been made for a huge farmer’s rights march demanding a permanent solution.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

22 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago