Advertisement
MIRROR FOCUS

ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |

Share
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಕಾಡಾನೆ(Elephent) ಹಾಗೂ ಕಾಡು ಪ್ರಾಣಿಗಳ (Wild Animals) ಕಾಟವು ಹೆಚ್ಚಾಗಿದೆ. ಕೃಷಿ ಹಾಗೂ ಕೃಷಿಕನ ಮೇಲೆ ನಿರಂತರ ಸಮಸ್ಯೆಯಾಗುತ್ತಿದೆ.ಆದರೂ ಯಾವುದೇ ಪರಿಹಾರ ಇಲ್ಲ. ಹೀಗಾಗಿ ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆಗೆ ಸಿದ್ಧತೆ ನಡೆದಿದೆ.
ಕಾಡಾನೆ ಹಾವಳಿ ತಪ್ಪಿಸಿ…. ಎಂದು ಜಾಗೃತ ರೈತ ಕುಟುಂಬಗಳ ಒಕ್ಕೂಟ ನೇತೃತ್ವದಲ್ಲಿ ಬೃಹತ್‌ ರೈತ ಹಕ್ಕೊತ್ತಾಯ ನಡೆಯಲಿದೆ. ಅ.26 ರಂದು ಕಡಬದ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಿಂದ ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ನಡೆಯಲಿದೆ. ಕೃಷಿಕರಿಗೆ  “ಖಾಯಂ” ಪರಿಹಾರದ ಹಕ್ಕೊತ್ತಾಯಕ್ಕಾಗಿ ಸರಕಾರದ ಗಮನ ತರುವ ದೃಷ್ಟಿಯಿಂದ ಕಡಬ ಪೇಟೆಯಲ್ಲಿ “ರೈತ ಹಕ್ಕೊತ್ತಾಯ ಬೃಹತ್ ಮೆರವಣಿಗೆ” ನಡೆಸಲಾಗುತ್ತಿದೆ.ಸ್ಥಳಿಯ ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ರಾಜಕೀಯ ರಹಿತವಾಗಿ ಈ ಹಕ್ಕೊತ್ತಾಯ ಮೆರವಣಿಗೆ ನಡೆಯಲಿದೆ.
ಪ್ರಮುಖವಾಗಿ ಕಾಡಾನೆಗಳ ಸ್ಥಳಾಂತರ ಮತ್ತು ಶಾಶ್ವತವಾಗಿ ತಡೆಬೇಲಿ ರಚನೆ, ಕಾಡಾನೆ ದಾಳಿ ಸಮಯದಲ್ಲಿ ಪ್ರಾಣಹಾನಿ ಸೇರಿದಂತೆ ಆರೋಗ್ಯಕ್ಕೆ ಎದುರಾಗುತ್ತಿರುವ ತೊಂದರೆಗಳು ಮತ್ತು ಕೃಷಿ ನಾಶಕ್ಕೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಈ ಮೆರವಣಿಗೆ ನಡೆಯಲಿದೆ.ಇದಕ್ಕೆ ಸರಕಾರ ವಿಫಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆಗಳು ಹಾಗೂ ರಸ್ತೆ ತಡೆಯಂತಹ ಧರಣಿಗಳೂ ನಡೆಸಲಾಗುತ್ತದೆ ಎಂದು ಸಾರ್ವಜನಿಕರು  ಎಚ್ಚರಿಸಿದ್ದಾರೆ.
In most of the villages of Kadaba Taluk of Dakshina Kannada district, elephant and wild animals have increased. There is a constant problem on agriculture and the farmer, but there is no solution. Therefore, preparations have been made for a huge farmer’s rights march demanding a permanent solution.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

3 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

7 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago