Advertisement
ರಾಜ್ಯ

ಎಂಡೋ ಸಂತ್ರಸ್ತರ ಮಾಸಾಶನ ಹೆಚ್ಚಿಸುವಂತೆ ಒತ್ತಾಯ | ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಆರೋಗ್ಯ ಸಚಿವರಿಗೆ ಮನವಿ |

Share

ಎಂಡೋ ಸಂತ್ರಸ್ತರ ಮಾಸಾಶನವನ್ನು ಹೆಚ್ಚಿಸುವಂತೆ ಹಾಗೂ  ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಒತ್ತಾಯಿಸಿ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ  ಶ್ರೀಧರ್ ಗೌಡ ಕೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗೇರು ಅಭಿವೃದ್ಧಿ ನಿಗಮವು 1980 ರಿಂದ 2000 ದ ತನಕ ಎಂಡೋಸಲ್ಫಾನ್ ವೈಮಾನಿಕ ಸಿಂಪಡಣೆ ನಡೆಸಿದ ಕಾರಣ 8600 ಕ್ಕಿಂತಲೂ ಹೆಚ್ಚು ಜನ ಎಂಡೋ ಪೀಡಿತರಾಗಿದ್ದು, ಇವರಲ್ಲಿ ಹಲವಾರು ಜನ ಮಲಗಿದ್ದಲ್ಲಿ ಇದ್ದು, ಉಳಿದವರು ಬೇರೆ ಬೇರೆ  ಅಂಗವೈಕಲ್ಯದಿಂದ, ಕ್ಯಾನ್ಸರ್, ಅಪಸ್ಮಾರ, ಬಂಜೆತನಗಳಿಂದ ನರಳುತ್ತಿದ್ದಾರೆ. ಇವರ ಈ ಪರಿಸ್ಥಿತಿಗೆ ಸರಕಾರ ಸಿಂಪಡಿಸಿದ ಎಂಡೋಸಲ್ಫಾನ್ ಕಾರಣವಾಗಿರುವುದರಿಂದ ಈ ಸಂತ್ರಸ್ತ ರಿಗೆ ಸರ್ಕಾರ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯಾಂಶಗಳು....

ಮನವಿ ಪತ್ರದ ಮುಖ್ಯ ಅಂಶಗಳು:

ಪ್ರಸ್ತುತ ನ್ಯಾಯಾಲಯದ ಆದೇಶದ ಪ್ರಕಾರ ಶೇ.60 ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 4000  ಹಾಗೂ  25 %ಕ್ಕಿಂತ ಹೆಚ್ಚು ಹಾಗೂ 60% ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 2000/- ಮಾಸಾಶನ ನೀಡುತ್ತಿದ್ದು ಇದನ್ನು ಕ್ರಮವಾಗಿ ರೂ.10000/-ಹಾಗೂ 5000/-ಹೆಚ್ಚಿಸಬೇಕು.

ಪ್ರಸ್ತುತ – 8600 ಜನರಲ್ಲಿ ಸುಮಾರು 1200 ಪೀಡಿತರನ್ನು ಕ್ಯಾನ್ಸರ್, ಬಂಜೆತನ ಮತ್ತಿತರ ಕಾಯಿಲೆಗಳ ಎಂಡೋ ಪೀಡಿತರೆಂದು ಗುರುತಿಸಿ ನೀಲಿ ಸ್ಮಾರ್ಟ್ ಕಾರ್ಡ್‌ನ್ನು ಮಾತ್ರ ನೀಡಿದ್ದು, ಇವರಿಗೂ ರೂ. 5000/-ಮಾಸಾಶನವನ್ನು ಒದಗಿಸಬೇಕು.

ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ  ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಮತ್ತು ತಾಲೂಕಿಗೊಂದು ಶಾಶ್ವತ ಪುನರ್ವಸತಿ ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಕೊಕ್ಕಡ ಹೋಬಳಿಯ ಸಮುದಾಯ ಆಸ್ಪತ್ರೆಗೆ ಫಿಷಿಯನ್ ಹುದ್ದೆಯನ್ನು ಸೃಷ್ಟಿ ಮಾಡಿ ಓರ್ವ ಪಿಸಿಶಿಯನ್, ಓರ್ವ ಸ್ತ್ರೀ ರೋಗ ತಜ್ಞೆ ಯನ್ನು  ಹಾಗೂ ನಿಯೋಜನೆಯಲ್ಲಿರುವ ಆರೋಗ್ಯಾಧಿಕಾರಿಯನ್ನು ಕೊಕ್ಕಡಕ್ಕೆ ಆರೋಗ್ಯಾಧಿಕಾರಿಯನ್ನಾಗಿಯೇ ನೇಮಿಸಬೇಕು.

ಎಲ್ಲಾ ಎಂಡೋ ಸಂಸ್ತರಿಗೆ ಪೌಷ್ಠಿಕ ಆಹಾರವನ್ನು ಒದಗಿಸಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

2 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

2 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

12 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

12 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

13 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

21 hours ago