Advertisement
ರಾಜ್ಯ

ಎಂಡೋ ಸಂತ್ರಸ್ತರ ಮಾಸಾಶನ ಹೆಚ್ಚಿಸುವಂತೆ ಒತ್ತಾಯ | ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಆರೋಗ್ಯ ಸಚಿವರಿಗೆ ಮನವಿ |

Share

ಎಂಡೋ ಸಂತ್ರಸ್ತರ ಮಾಸಾಶನವನ್ನು ಹೆಚ್ಚಿಸುವಂತೆ ಹಾಗೂ  ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಒತ್ತಾಯಿಸಿ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ  ಶ್ರೀಧರ್ ಗೌಡ ಕೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗೇರು ಅಭಿವೃದ್ಧಿ ನಿಗಮವು 1980 ರಿಂದ 2000 ದ ತನಕ ಎಂಡೋಸಲ್ಫಾನ್ ವೈಮಾನಿಕ ಸಿಂಪಡಣೆ ನಡೆಸಿದ ಕಾರಣ 8600 ಕ್ಕಿಂತಲೂ ಹೆಚ್ಚು ಜನ ಎಂಡೋ ಪೀಡಿತರಾಗಿದ್ದು, ಇವರಲ್ಲಿ ಹಲವಾರು ಜನ ಮಲಗಿದ್ದಲ್ಲಿ ಇದ್ದು, ಉಳಿದವರು ಬೇರೆ ಬೇರೆ  ಅಂಗವೈಕಲ್ಯದಿಂದ, ಕ್ಯಾನ್ಸರ್, ಅಪಸ್ಮಾರ, ಬಂಜೆತನಗಳಿಂದ ನರಳುತ್ತಿದ್ದಾರೆ. ಇವರ ಈ ಪರಿಸ್ಥಿತಿಗೆ ಸರಕಾರ ಸಿಂಪಡಿಸಿದ ಎಂಡೋಸಲ್ಫಾನ್ ಕಾರಣವಾಗಿರುವುದರಿಂದ ಈ ಸಂತ್ರಸ್ತ ರಿಗೆ ಸರ್ಕಾರ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯಾಂಶಗಳು....

ಮನವಿ ಪತ್ರದ ಮುಖ್ಯ ಅಂಶಗಳು:

ಪ್ರಸ್ತುತ ನ್ಯಾಯಾಲಯದ ಆದೇಶದ ಪ್ರಕಾರ ಶೇ.60 ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 4000  ಹಾಗೂ  25 %ಕ್ಕಿಂತ ಹೆಚ್ಚು ಹಾಗೂ 60% ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 2000/- ಮಾಸಾಶನ ನೀಡುತ್ತಿದ್ದು ಇದನ್ನು ಕ್ರಮವಾಗಿ ರೂ.10000/-ಹಾಗೂ 5000/-ಹೆಚ್ಚಿಸಬೇಕು.

ಪ್ರಸ್ತುತ – 8600 ಜನರಲ್ಲಿ ಸುಮಾರು 1200 ಪೀಡಿತರನ್ನು ಕ್ಯಾನ್ಸರ್, ಬಂಜೆತನ ಮತ್ತಿತರ ಕಾಯಿಲೆಗಳ ಎಂಡೋ ಪೀಡಿತರೆಂದು ಗುರುತಿಸಿ ನೀಲಿ ಸ್ಮಾರ್ಟ್ ಕಾರ್ಡ್‌ನ್ನು ಮಾತ್ರ ನೀಡಿದ್ದು, ಇವರಿಗೂ ರೂ. 5000/-ಮಾಸಾಶನವನ್ನು ಒದಗಿಸಬೇಕು.

ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ  ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಮತ್ತು ತಾಲೂಕಿಗೊಂದು ಶಾಶ್ವತ ಪುನರ್ವಸತಿ ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಕೊಕ್ಕಡ ಹೋಬಳಿಯ ಸಮುದಾಯ ಆಸ್ಪತ್ರೆಗೆ ಫಿಷಿಯನ್ ಹುದ್ದೆಯನ್ನು ಸೃಷ್ಟಿ ಮಾಡಿ ಓರ್ವ ಪಿಸಿಶಿಯನ್, ಓರ್ವ ಸ್ತ್ರೀ ರೋಗ ತಜ್ಞೆ ಯನ್ನು  ಹಾಗೂ ನಿಯೋಜನೆಯಲ್ಲಿರುವ ಆರೋಗ್ಯಾಧಿಕಾರಿಯನ್ನು ಕೊಕ್ಕಡಕ್ಕೆ ಆರೋಗ್ಯಾಧಿಕಾರಿಯನ್ನಾಗಿಯೇ ನೇಮಿಸಬೇಕು.

ಎಲ್ಲಾ ಎಂಡೋ ಸಂಸ್ತರಿಗೆ ಪೌಷ್ಠಿಕ ಆಹಾರವನ್ನು ಒದಗಿಸಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

19 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

19 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago