Advertisement
ರಾಜ್ಯ

ಎಂಡೋ ಸಂತ್ರಸ್ತರ ಮಾಸಾಶನ ಹೆಚ್ಚಿಸುವಂತೆ ಒತ್ತಾಯ | ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಆರೋಗ್ಯ ಸಚಿವರಿಗೆ ಮನವಿ |

Share

ಎಂಡೋ ಸಂತ್ರಸ್ತರ ಮಾಸಾಶನವನ್ನು ಹೆಚ್ಚಿಸುವಂತೆ ಹಾಗೂ  ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಒತ್ತಾಯಿಸಿ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ  ಶ್ರೀಧರ್ ಗೌಡ ಕೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದರು.

Advertisement

ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗೇರು ಅಭಿವೃದ್ಧಿ ನಿಗಮವು 1980 ರಿಂದ 2000 ದ ತನಕ ಎಂಡೋಸಲ್ಫಾನ್ ವೈಮಾನಿಕ ಸಿಂಪಡಣೆ ನಡೆಸಿದ ಕಾರಣ 8600 ಕ್ಕಿಂತಲೂ ಹೆಚ್ಚು ಜನ ಎಂಡೋ ಪೀಡಿತರಾಗಿದ್ದು, ಇವರಲ್ಲಿ ಹಲವಾರು ಜನ ಮಲಗಿದ್ದಲ್ಲಿ ಇದ್ದು, ಉಳಿದವರು ಬೇರೆ ಬೇರೆ  ಅಂಗವೈಕಲ್ಯದಿಂದ, ಕ್ಯಾನ್ಸರ್, ಅಪಸ್ಮಾರ, ಬಂಜೆತನಗಳಿಂದ ನರಳುತ್ತಿದ್ದಾರೆ. ಇವರ ಈ ಪರಿಸ್ಥಿತಿಗೆ ಸರಕಾರ ಸಿಂಪಡಿಸಿದ ಎಂಡೋಸಲ್ಫಾನ್ ಕಾರಣವಾಗಿರುವುದರಿಂದ ಈ ಸಂತ್ರಸ್ತ ರಿಗೆ ಸರ್ಕಾರ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯಾಂಶಗಳು....

ಮನವಿ ಪತ್ರದ ಮುಖ್ಯ ಅಂಶಗಳು:

ಪ್ರಸ್ತುತ ನ್ಯಾಯಾಲಯದ ಆದೇಶದ ಪ್ರಕಾರ ಶೇ.60 ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 4000  ಹಾಗೂ  25 %ಕ್ಕಿಂತ ಹೆಚ್ಚು ಹಾಗೂ 60% ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 2000/- ಮಾಸಾಶನ ನೀಡುತ್ತಿದ್ದು ಇದನ್ನು ಕ್ರಮವಾಗಿ ರೂ.10000/-ಹಾಗೂ 5000/-ಹೆಚ್ಚಿಸಬೇಕು.

ಪ್ರಸ್ತುತ – 8600 ಜನರಲ್ಲಿ ಸುಮಾರು 1200 ಪೀಡಿತರನ್ನು ಕ್ಯಾನ್ಸರ್, ಬಂಜೆತನ ಮತ್ತಿತರ ಕಾಯಿಲೆಗಳ ಎಂಡೋ ಪೀಡಿತರೆಂದು ಗುರುತಿಸಿ ನೀಲಿ ಸ್ಮಾರ್ಟ್ ಕಾರ್ಡ್‌ನ್ನು ಮಾತ್ರ ನೀಡಿದ್ದು, ಇವರಿಗೂ ರೂ. 5000/-ಮಾಸಾಶನವನ್ನು ಒದಗಿಸಬೇಕು.

ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ  ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಮತ್ತು ತಾಲೂಕಿಗೊಂದು ಶಾಶ್ವತ ಪುನರ್ವಸತಿ ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಕೊಕ್ಕಡ ಹೋಬಳಿಯ ಸಮುದಾಯ ಆಸ್ಪತ್ರೆಗೆ ಫಿಷಿಯನ್ ಹುದ್ದೆಯನ್ನು ಸೃಷ್ಟಿ ಮಾಡಿ ಓರ್ವ ಪಿಸಿಶಿಯನ್, ಓರ್ವ ಸ್ತ್ರೀ ರೋಗ ತಜ್ಞೆ ಯನ್ನು  ಹಾಗೂ ನಿಯೋಜನೆಯಲ್ಲಿರುವ ಆರೋಗ್ಯಾಧಿಕಾರಿಯನ್ನು ಕೊಕ್ಕಡಕ್ಕೆ ಆರೋಗ್ಯಾಧಿಕಾರಿಯನ್ನಾಗಿಯೇ ನೇಮಿಸಬೇಕು.

ಎಲ್ಲಾ ಎಂಡೋ ಸಂಸ್ತರಿಗೆ ಪೌಷ್ಠಿಕ ಆಹಾರವನ್ನು ಒದಗಿಸಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

7 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

22 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

22 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

22 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

22 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

22 hours ago