Advertisement
ರಾಜ್ಯ

ಎಂಡೋ ಸಂತ್ರಸ್ತರ ಮಾಸಾಶನ ಹೆಚ್ಚಿಸುವಂತೆ ಒತ್ತಾಯ | ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಆರೋಗ್ಯ ಸಚಿವರಿಗೆ ಮನವಿ |

Share

ಎಂಡೋ ಸಂತ್ರಸ್ತರ ಮಾಸಾಶನವನ್ನು ಹೆಚ್ಚಿಸುವಂತೆ ಹಾಗೂ  ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಒತ್ತಾಯಿಸಿ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ  ಶ್ರೀಧರ್ ಗೌಡ ಕೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗೇರು ಅಭಿವೃದ್ಧಿ ನಿಗಮವು 1980 ರಿಂದ 2000 ದ ತನಕ ಎಂಡೋಸಲ್ಫಾನ್ ವೈಮಾನಿಕ ಸಿಂಪಡಣೆ ನಡೆಸಿದ ಕಾರಣ 8600 ಕ್ಕಿಂತಲೂ ಹೆಚ್ಚು ಜನ ಎಂಡೋ ಪೀಡಿತರಾಗಿದ್ದು, ಇವರಲ್ಲಿ ಹಲವಾರು ಜನ ಮಲಗಿದ್ದಲ್ಲಿ ಇದ್ದು, ಉಳಿದವರು ಬೇರೆ ಬೇರೆ  ಅಂಗವೈಕಲ್ಯದಿಂದ, ಕ್ಯಾನ್ಸರ್, ಅಪಸ್ಮಾರ, ಬಂಜೆತನಗಳಿಂದ ನರಳುತ್ತಿದ್ದಾರೆ. ಇವರ ಈ ಪರಿಸ್ಥಿತಿಗೆ ಸರಕಾರ ಸಿಂಪಡಿಸಿದ ಎಂಡೋಸಲ್ಫಾನ್ ಕಾರಣವಾಗಿರುವುದರಿಂದ ಈ ಸಂತ್ರಸ್ತ ರಿಗೆ ಸರ್ಕಾರ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯಾಂಶಗಳು....

ಮನವಿ ಪತ್ರದ ಮುಖ್ಯ ಅಂಶಗಳು:

ಪ್ರಸ್ತುತ ನ್ಯಾಯಾಲಯದ ಆದೇಶದ ಪ್ರಕಾರ ಶೇ.60 ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 4000  ಹಾಗೂ  25 %ಕ್ಕಿಂತ ಹೆಚ್ಚು ಹಾಗೂ 60% ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 2000/- ಮಾಸಾಶನ ನೀಡುತ್ತಿದ್ದು ಇದನ್ನು ಕ್ರಮವಾಗಿ ರೂ.10000/-ಹಾಗೂ 5000/-ಹೆಚ್ಚಿಸಬೇಕು.

ಪ್ರಸ್ತುತ – 8600 ಜನರಲ್ಲಿ ಸುಮಾರು 1200 ಪೀಡಿತರನ್ನು ಕ್ಯಾನ್ಸರ್, ಬಂಜೆತನ ಮತ್ತಿತರ ಕಾಯಿಲೆಗಳ ಎಂಡೋ ಪೀಡಿತರೆಂದು ಗುರುತಿಸಿ ನೀಲಿ ಸ್ಮಾರ್ಟ್ ಕಾರ್ಡ್‌ನ್ನು ಮಾತ್ರ ನೀಡಿದ್ದು, ಇವರಿಗೂ ರೂ. 5000/-ಮಾಸಾಶನವನ್ನು ಒದಗಿಸಬೇಕು.

ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ  ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಮತ್ತು ತಾಲೂಕಿಗೊಂದು ಶಾಶ್ವತ ಪುನರ್ವಸತಿ ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಕೊಕ್ಕಡ ಹೋಬಳಿಯ ಸಮುದಾಯ ಆಸ್ಪತ್ರೆಗೆ ಫಿಷಿಯನ್ ಹುದ್ದೆಯನ್ನು ಸೃಷ್ಟಿ ಮಾಡಿ ಓರ್ವ ಪಿಸಿಶಿಯನ್, ಓರ್ವ ಸ್ತ್ರೀ ರೋಗ ತಜ್ಞೆ ಯನ್ನು  ಹಾಗೂ ನಿಯೋಜನೆಯಲ್ಲಿರುವ ಆರೋಗ್ಯಾಧಿಕಾರಿಯನ್ನು ಕೊಕ್ಕಡಕ್ಕೆ ಆರೋಗ್ಯಾಧಿಕಾರಿಯನ್ನಾಗಿಯೇ ನೇಮಿಸಬೇಕು.

ಎಲ್ಲಾ ಎಂಡೋ ಸಂಸ್ತರಿಗೆ ಪೌಷ್ಠಿಕ ಆಹಾರವನ್ನು ಒದಗಿಸಬೇಕು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

17 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

24 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago