Advertisement
ರಾಜ್ಯ

ಎಂಡೋ ಸಂತ್ರಸ್ತರ ಮಾಸಾಶನ ಹೆಚ್ಚಿಸುವಂತೆ ಒತ್ತಾಯ | ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಆರೋಗ್ಯ ಸಚಿವರಿಗೆ ಮನವಿ |

Share

ಎಂಡೋ ಸಂತ್ರಸ್ತರ ಮಾಸಾಶನವನ್ನು ಹೆಚ್ಚಿಸುವಂತೆ ಹಾಗೂ  ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಒತ್ತಾಯಿಸಿ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ  ಶ್ರೀಧರ್ ಗೌಡ ಕೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗೇರು ಅಭಿವೃದ್ಧಿ ನಿಗಮವು 1980 ರಿಂದ 2000 ದ ತನಕ ಎಂಡೋಸಲ್ಫಾನ್ ವೈಮಾನಿಕ ಸಿಂಪಡಣೆ ನಡೆಸಿದ ಕಾರಣ 8600 ಕ್ಕಿಂತಲೂ ಹೆಚ್ಚು ಜನ ಎಂಡೋ ಪೀಡಿತರಾಗಿದ್ದು, ಇವರಲ್ಲಿ ಹಲವಾರು ಜನ ಮಲಗಿದ್ದಲ್ಲಿ ಇದ್ದು, ಉಳಿದವರು ಬೇರೆ ಬೇರೆ  ಅಂಗವೈಕಲ್ಯದಿಂದ, ಕ್ಯಾನ್ಸರ್, ಅಪಸ್ಮಾರ, ಬಂಜೆತನಗಳಿಂದ ನರಳುತ್ತಿದ್ದಾರೆ. ಇವರ ಈ ಪರಿಸ್ಥಿತಿಗೆ ಸರಕಾರ ಸಿಂಪಡಿಸಿದ ಎಂಡೋಸಲ್ಫಾನ್ ಕಾರಣವಾಗಿರುವುದರಿಂದ ಈ ಸಂತ್ರಸ್ತ ರಿಗೆ ಸರ್ಕಾರ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯಾಂಶಗಳು....

ಮನವಿ ಪತ್ರದ ಮುಖ್ಯ ಅಂಶಗಳು:

ಪ್ರಸ್ತುತ ನ್ಯಾಯಾಲಯದ ಆದೇಶದ ಪ್ರಕಾರ ಶೇ.60 ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 4000  ಹಾಗೂ  25 %ಕ್ಕಿಂತ ಹೆಚ್ಚು ಹಾಗೂ 60% ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 2000/- ಮಾಸಾಶನ ನೀಡುತ್ತಿದ್ದು ಇದನ್ನು ಕ್ರಮವಾಗಿ ರೂ.10000/-ಹಾಗೂ 5000/-ಹೆಚ್ಚಿಸಬೇಕು.

ಪ್ರಸ್ತುತ – 8600 ಜನರಲ್ಲಿ ಸುಮಾರು 1200 ಪೀಡಿತರನ್ನು ಕ್ಯಾನ್ಸರ್, ಬಂಜೆತನ ಮತ್ತಿತರ ಕಾಯಿಲೆಗಳ ಎಂಡೋ ಪೀಡಿತರೆಂದು ಗುರುತಿಸಿ ನೀಲಿ ಸ್ಮಾರ್ಟ್ ಕಾರ್ಡ್‌ನ್ನು ಮಾತ್ರ ನೀಡಿದ್ದು, ಇವರಿಗೂ ರೂ. 5000/-ಮಾಸಾಶನವನ್ನು ಒದಗಿಸಬೇಕು.

ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ  ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಮತ್ತು ತಾಲೂಕಿಗೊಂದು ಶಾಶ್ವತ ಪುನರ್ವಸತಿ ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಕೊಕ್ಕಡ ಹೋಬಳಿಯ ಸಮುದಾಯ ಆಸ್ಪತ್ರೆಗೆ ಫಿಷಿಯನ್ ಹುದ್ದೆಯನ್ನು ಸೃಷ್ಟಿ ಮಾಡಿ ಓರ್ವ ಪಿಸಿಶಿಯನ್, ಓರ್ವ ಸ್ತ್ರೀ ರೋಗ ತಜ್ಞೆ ಯನ್ನು  ಹಾಗೂ ನಿಯೋಜನೆಯಲ್ಲಿರುವ ಆರೋಗ್ಯಾಧಿಕಾರಿಯನ್ನು ಕೊಕ್ಕಡಕ್ಕೆ ಆರೋಗ್ಯಾಧಿಕಾರಿಯನ್ನಾಗಿಯೇ ನೇಮಿಸಬೇಕು.

ಎಲ್ಲಾ ಎಂಡೋ ಸಂಸ್ತರಿಗೆ ಪೌಷ್ಠಿಕ ಆಹಾರವನ್ನು ಒದಗಿಸಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

2 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

2 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

2 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

3 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

12 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

15 hours ago