Advertisement
ರಾಜ್ಯ

ಎಂಡೋ ಸಂತ್ರಸ್ತರ ಮಾಸಾಶನ ಹೆಚ್ಚಿಸುವಂತೆ ಒತ್ತಾಯ | ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಆರೋಗ್ಯ ಸಚಿವರಿಗೆ ಮನವಿ |

Share

ಎಂಡೋ ಸಂತ್ರಸ್ತರ ಮಾಸಾಶನವನ್ನು ಹೆಚ್ಚಿಸುವಂತೆ ಹಾಗೂ  ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಒತ್ತಾಯಿಸಿ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ  ಶ್ರೀಧರ್ ಗೌಡ ಕೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗೇರು ಅಭಿವೃದ್ಧಿ ನಿಗಮವು 1980 ರಿಂದ 2000 ದ ತನಕ ಎಂಡೋಸಲ್ಫಾನ್ ವೈಮಾನಿಕ ಸಿಂಪಡಣೆ ನಡೆಸಿದ ಕಾರಣ 8600 ಕ್ಕಿಂತಲೂ ಹೆಚ್ಚು ಜನ ಎಂಡೋ ಪೀಡಿತರಾಗಿದ್ದು, ಇವರಲ್ಲಿ ಹಲವಾರು ಜನ ಮಲಗಿದ್ದಲ್ಲಿ ಇದ್ದು, ಉಳಿದವರು ಬೇರೆ ಬೇರೆ  ಅಂಗವೈಕಲ್ಯದಿಂದ, ಕ್ಯಾನ್ಸರ್, ಅಪಸ್ಮಾರ, ಬಂಜೆತನಗಳಿಂದ ನರಳುತ್ತಿದ್ದಾರೆ. ಇವರ ಈ ಪರಿಸ್ಥಿತಿಗೆ ಸರಕಾರ ಸಿಂಪಡಿಸಿದ ಎಂಡೋಸಲ್ಫಾನ್ ಕಾರಣವಾಗಿರುವುದರಿಂದ ಈ ಸಂತ್ರಸ್ತ ರಿಗೆ ಸರ್ಕಾರ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯಾಂಶಗಳು....

ಮನವಿ ಪತ್ರದ ಮುಖ್ಯ ಅಂಶಗಳು:

ಪ್ರಸ್ತುತ ನ್ಯಾಯಾಲಯದ ಆದೇಶದ ಪ್ರಕಾರ ಶೇ.60 ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 4000  ಹಾಗೂ  25 %ಕ್ಕಿಂತ ಹೆಚ್ಚು ಹಾಗೂ 60% ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 2000/- ಮಾಸಾಶನ ನೀಡುತ್ತಿದ್ದು ಇದನ್ನು ಕ್ರಮವಾಗಿ ರೂ.10000/-ಹಾಗೂ 5000/-ಹೆಚ್ಚಿಸಬೇಕು.

ಪ್ರಸ್ತುತ – 8600 ಜನರಲ್ಲಿ ಸುಮಾರು 1200 ಪೀಡಿತರನ್ನು ಕ್ಯಾನ್ಸರ್, ಬಂಜೆತನ ಮತ್ತಿತರ ಕಾಯಿಲೆಗಳ ಎಂಡೋ ಪೀಡಿತರೆಂದು ಗುರುತಿಸಿ ನೀಲಿ ಸ್ಮಾರ್ಟ್ ಕಾರ್ಡ್‌ನ್ನು ಮಾತ್ರ ನೀಡಿದ್ದು, ಇವರಿಗೂ ರೂ. 5000/-ಮಾಸಾಶನವನ್ನು ಒದಗಿಸಬೇಕು.

ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ  ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಮತ್ತು ತಾಲೂಕಿಗೊಂದು ಶಾಶ್ವತ ಪುನರ್ವಸತಿ ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಕೊಕ್ಕಡ ಹೋಬಳಿಯ ಸಮುದಾಯ ಆಸ್ಪತ್ರೆಗೆ ಫಿಷಿಯನ್ ಹುದ್ದೆಯನ್ನು ಸೃಷ್ಟಿ ಮಾಡಿ ಓರ್ವ ಪಿಸಿಶಿಯನ್, ಓರ್ವ ಸ್ತ್ರೀ ರೋಗ ತಜ್ಞೆ ಯನ್ನು  ಹಾಗೂ ನಿಯೋಜನೆಯಲ್ಲಿರುವ ಆರೋಗ್ಯಾಧಿಕಾರಿಯನ್ನು ಕೊಕ್ಕಡಕ್ಕೆ ಆರೋಗ್ಯಾಧಿಕಾರಿಯನ್ನಾಗಿಯೇ ನೇಮಿಸಬೇಕು.

ಎಲ್ಲಾ ಎಂಡೋ ಸಂಸ್ತರಿಗೆ ಪೌಷ್ಠಿಕ ಆಹಾರವನ್ನು ಒದಗಿಸಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

11 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

12 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

12 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

13 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

13 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

16 hours ago