Advertisement
ರಾಜ್ಯ

ಎಂಡೋ ಸಂತ್ರಸ್ತರ ಮಾಸಾಶನ ಹೆಚ್ಚಿಸುವಂತೆ ಒತ್ತಾಯ | ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಆರೋಗ್ಯ ಸಚಿವರಿಗೆ ಮನವಿ |

Share

ಎಂಡೋ ಸಂತ್ರಸ್ತರ ಮಾಸಾಶನವನ್ನು ಹೆಚ್ಚಿಸುವಂತೆ ಹಾಗೂ  ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನೀಡುವಂತೆ ಒತ್ತಾಯಿಸಿ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ  ಶ್ರೀಧರ್ ಗೌಡ ಕೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗೇರು ಅಭಿವೃದ್ಧಿ ನಿಗಮವು 1980 ರಿಂದ 2000 ದ ತನಕ ಎಂಡೋಸಲ್ಫಾನ್ ವೈಮಾನಿಕ ಸಿಂಪಡಣೆ ನಡೆಸಿದ ಕಾರಣ 8600 ಕ್ಕಿಂತಲೂ ಹೆಚ್ಚು ಜನ ಎಂಡೋ ಪೀಡಿತರಾಗಿದ್ದು, ಇವರಲ್ಲಿ ಹಲವಾರು ಜನ ಮಲಗಿದ್ದಲ್ಲಿ ಇದ್ದು, ಉಳಿದವರು ಬೇರೆ ಬೇರೆ  ಅಂಗವೈಕಲ್ಯದಿಂದ, ಕ್ಯಾನ್ಸರ್, ಅಪಸ್ಮಾರ, ಬಂಜೆತನಗಳಿಂದ ನರಳುತ್ತಿದ್ದಾರೆ. ಇವರ ಈ ಪರಿಸ್ಥಿತಿಗೆ ಸರಕಾರ ಸಿಂಪಡಿಸಿದ ಎಂಡೋಸಲ್ಫಾನ್ ಕಾರಣವಾಗಿರುವುದರಿಂದ ಈ ಸಂತ್ರಸ್ತ ರಿಗೆ ಸರ್ಕಾರ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯಾಂಶಗಳು....

ಮನವಿ ಪತ್ರದ ಮುಖ್ಯ ಅಂಶಗಳು:

ಪ್ರಸ್ತುತ ನ್ಯಾಯಾಲಯದ ಆದೇಶದ ಪ್ರಕಾರ ಶೇ.60 ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 4000  ಹಾಗೂ  25 %ಕ್ಕಿಂತ ಹೆಚ್ಚು ಹಾಗೂ 60% ಕ್ಕಿಂತ ಹೆಚ್ಚು ಬಾಧಿತರಾದವರಿಗೆ ರೂ. 2000/- ಮಾಸಾಶನ ನೀಡುತ್ತಿದ್ದು ಇದನ್ನು ಕ್ರಮವಾಗಿ ರೂ.10000/-ಹಾಗೂ 5000/-ಹೆಚ್ಚಿಸಬೇಕು.

ಪ್ರಸ್ತುತ – 8600 ಜನರಲ್ಲಿ ಸುಮಾರು 1200 ಪೀಡಿತರನ್ನು ಕ್ಯಾನ್ಸರ್, ಬಂಜೆತನ ಮತ್ತಿತರ ಕಾಯಿಲೆಗಳ ಎಂಡೋ ಪೀಡಿತರೆಂದು ಗುರುತಿಸಿ ನೀಲಿ ಸ್ಮಾರ್ಟ್ ಕಾರ್ಡ್‌ನ್ನು ಮಾತ್ರ ನೀಡಿದ್ದು, ಇವರಿಗೂ ರೂ. 5000/-ಮಾಸಾಶನವನ್ನು ಒದಗಿಸಬೇಕು.

ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ  ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಮತ್ತು ತಾಲೂಕಿಗೊಂದು ಶಾಶ್ವತ ಪುನರ್ವಸತಿ ಕೇಂದ್ರವನ್ನು ನಿರ್ಮಾಣ ಮಾಡಿಕೊಡಬೇಕು. ಕೊಕ್ಕಡ ಹೋಬಳಿಯ ಸಮುದಾಯ ಆಸ್ಪತ್ರೆಗೆ ಫಿಷಿಯನ್ ಹುದ್ದೆಯನ್ನು ಸೃಷ್ಟಿ ಮಾಡಿ ಓರ್ವ ಪಿಸಿಶಿಯನ್, ಓರ್ವ ಸ್ತ್ರೀ ರೋಗ ತಜ್ಞೆ ಯನ್ನು  ಹಾಗೂ ನಿಯೋಜನೆಯಲ್ಲಿರುವ ಆರೋಗ್ಯಾಧಿಕಾರಿಯನ್ನು ಕೊಕ್ಕಡಕ್ಕೆ ಆರೋಗ್ಯಾಧಿಕಾರಿಯನ್ನಾಗಿಯೇ ನೇಮಿಸಬೇಕು.

ಎಲ್ಲಾ ಎಂಡೋ ಸಂಸ್ತರಿಗೆ ಪೌಷ್ಠಿಕ ಆಹಾರವನ್ನು ಒದಗಿಸಬೇಕು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

4 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

3 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

3 days ago