ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ….! | ರೈತ ಸಂಘ ನೀಡಿದ್ದ ಮನವಿಯೂ ಕಸಕ್ಕೆ ಸೇರಿತು…! | ರೈತರ ಬಗ್ಗೆಯೂ ಯಾಕಿಷ್ಟು ನಿರ್ಲಕ್ಷ್ಯ- ಆಕ್ರೋಶ |

July 13, 2024
12:00 PM

ಮಳೆ ಬಿಸಿಲು ಲೆಕ್ಕಿಸದೆ ದಿನವಿಡೀ ಸಾಲು ನಿಂತು ತಮ್ಮ ಕಷ್ಟಗಳನ್ನು ಪರಿಹರಿಸಲು ಮನವಿ ಪತ್ರಗಳನ್ನು ಜನರು ಕೊಡುತ್ತಾರೆ. ತಮ್ಮ ಕಷ್ಟ ನಮ್ಮ ನಾಡಿನ ದೊರೆಯ ಕೈ ಸೇರಿದೆ ಎಂದು ಜನರೂ ಸಂತಸ ಪಡುತ್ತಾರೆ. ಹಾಗಾಗಿ ಇಂದಲ್ಲ ನಾಳೆ ಕಷ್ಟಕ್ಕೆ ಪರಿಹಾರ ಸಿಗಬಹುದು ಎಂದು ಆಸೆಯಿಂದ ಕಾಯುತ್ತಿರುತ್ತಾರೆ. ಆದರೆ ಜನಸೇವಕ ಅನ್ನಿಸಿಕೊಂಡ ನಮ್ಮ ಮುಖ್ಯಮಂತ್ರಿಗಳು ಸಾರ್ವಜನಿಕರ ಮನವಿ ಪತ್ರಗಳನ್ನು ಏನು ಮಾಡಿದ್ದಾರೆ ಅನ್ನೋದನ್ನ ನೀವೇ ನೋಡಿ..

ಜು.10 ರಂದು ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದರು. ಆ ವೇಳೆ ರೈತ ಸಂಘದ ನಾಯಕರು ಸಿಎಂ ಸಿದ್ದರಾಮಯ್ಯಗೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ ಪತ್ರಗಳನ್ನು ಕೊಟ್ಟಿದ್ದರು. ಆದರೆ ಈ ಮನವಿ ಪತ್ರಗಳು  ಕಸದ ಬುಟ್ಟಿ ಸೇರಿವೆ. ಮುಖ್ಯಮಂತ್ರಿಗಳನ್ನೇ ಭೇಟಿ ಮಾಡಿ ಮನವಿ ಸಲ್ಲಿಸಿದರೆ ಸಮಸ್ಯೆಗೆ ಪರಿಹಾರ ಆಗುತ್ತದೆ ಎನ್ನುವುದು ಜನರ ಭರವಸೆ. ಆದರೆ ಮುಖ್ಯಮಂತ್ರಿಗಳು ಸ್ವೀಕರಿಸಿದ್ದ ಮನವಿ ಪತ್ರಗಳು ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿವೆ. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಮನವಿ ಸಲ್ಲಿಸಿದ್ದ ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು, ಇದು ನಿರ್ಲಕ್ಷ್ಯದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರೂ ಯಾಕೆ? ರೈತರ ಬಗ್ಗೆ ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿಗೆ ಸಲ್ಲಿಸುವ ಮನವಿಗಳ ಕಥೆ ಏನು ಎಂದು ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ದಲ್ಲಿ ಚಾಮರಾಜನಗರ ಜಿಲ್ಲೆಗೆ ಭೇಟಿ ಮಾಡಿದಾಗ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಸದ ರಾಶಿ ಸೇರಿದ ಮನವಿ ಪತ್ರಗಳ ವೀಡಿಯೋ ವೈರಲ್ ಆಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror