MIRROR FOCUS

ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ….! | ರೈತ ಸಂಘ ನೀಡಿದ್ದ ಮನವಿಯೂ ಕಸಕ್ಕೆ ಸೇರಿತು…! | ರೈತರ ಬಗ್ಗೆಯೂ ಯಾಕಿಷ್ಟು ನಿರ್ಲಕ್ಷ್ಯ- ಆಕ್ರೋಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆ ಬಿಸಿಲು ಲೆಕ್ಕಿಸದೆ ದಿನವಿಡೀ ಸಾಲು ನಿಂತು ತಮ್ಮ ಕಷ್ಟಗಳನ್ನು ಪರಿಹರಿಸಲು ಮನವಿ ಪತ್ರಗಳನ್ನು ಜನರು ಕೊಡುತ್ತಾರೆ. ತಮ್ಮ ಕಷ್ಟ ನಮ್ಮ ನಾಡಿನ ದೊರೆಯ ಕೈ ಸೇರಿದೆ ಎಂದು ಜನರೂ ಸಂತಸ ಪಡುತ್ತಾರೆ. ಹಾಗಾಗಿ ಇಂದಲ್ಲ ನಾಳೆ ಕಷ್ಟಕ್ಕೆ ಪರಿಹಾರ ಸಿಗಬಹುದು ಎಂದು ಆಸೆಯಿಂದ ಕಾಯುತ್ತಿರುತ್ತಾರೆ. ಆದರೆ ಜನಸೇವಕ ಅನ್ನಿಸಿಕೊಂಡ ನಮ್ಮ ಮುಖ್ಯಮಂತ್ರಿಗಳು ಸಾರ್ವಜನಿಕರ ಮನವಿ ಪತ್ರಗಳನ್ನು ಏನು ಮಾಡಿದ್ದಾರೆ ಅನ್ನೋದನ್ನ ನೀವೇ ನೋಡಿ..

Advertisement
Advertisement
ಜು.10 ರಂದು ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದರು. ಆ ವೇಳೆ ರೈತ ಸಂಘದ ನಾಯಕರು ಸಿಎಂ ಸಿದ್ದರಾಮಯ್ಯಗೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ ಪತ್ರಗಳನ್ನು ಕೊಟ್ಟಿದ್ದರು. ಆದರೆ ಈ ಮನವಿ ಪತ್ರಗಳು  ಕಸದ ಬುಟ್ಟಿ ಸೇರಿವೆ. ಮುಖ್ಯಮಂತ್ರಿಗಳನ್ನೇ ಭೇಟಿ ಮಾಡಿ ಮನವಿ ಸಲ್ಲಿಸಿದರೆ ಸಮಸ್ಯೆಗೆ ಪರಿಹಾರ ಆಗುತ್ತದೆ ಎನ್ನುವುದು ಜನರ ಭರವಸೆ. ಆದರೆ ಮುಖ್ಯಮಂತ್ರಿಗಳು ಸ್ವೀಕರಿಸಿದ್ದ ಮನವಿ ಪತ್ರಗಳು ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿವೆ. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಮನವಿ ಸಲ್ಲಿಸಿದ್ದ ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು, ಇದು ನಿರ್ಲಕ್ಷ್ಯದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರೂ ಯಾಕೆ? ರೈತರ ಬಗ್ಗೆ ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿಗೆ ಸಲ್ಲಿಸುವ ಮನವಿಗಳ ಕಥೆ ಏನು ಎಂದು ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ದಲ್ಲಿ ಚಾಮರಾಜನಗರ ಜಿಲ್ಲೆಗೆ ಭೇಟಿ ಮಾಡಿದಾಗ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಸದ ರಾಶಿ ಸೇರಿದ ಮನವಿ ಪತ್ರಗಳ ವೀಡಿಯೋ ವೈರಲ್ ಆಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

6 hours ago

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…

7 hours ago

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ | ರಾಜ್ಯದ ನದಿಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು

ಮಹಾರಾಷ್ಟ್ರದಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…

7 hours ago

ವಾರದ ಅತಿಥಿ | ಮರ ಬಳಸದೆಯೇ ಮನೆ ನಿರ್ಮಾಣ, “ದ್ವಾರಕಾ”ದಿಂದ ಪರಿಸರಕ್ಕೊಂದು ಕೊಡುಗೆ

ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…

11 hours ago

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

1 day ago