Advertisement
MIRROR FOCUS

ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ….! | ರೈತ ಸಂಘ ನೀಡಿದ್ದ ಮನವಿಯೂ ಕಸಕ್ಕೆ ಸೇರಿತು…! | ರೈತರ ಬಗ್ಗೆಯೂ ಯಾಕಿಷ್ಟು ನಿರ್ಲಕ್ಷ್ಯ- ಆಕ್ರೋಶ |

Share

ಮಳೆ ಬಿಸಿಲು ಲೆಕ್ಕಿಸದೆ ದಿನವಿಡೀ ಸಾಲು ನಿಂತು ತಮ್ಮ ಕಷ್ಟಗಳನ್ನು ಪರಿಹರಿಸಲು ಮನವಿ ಪತ್ರಗಳನ್ನು ಜನರು ಕೊಡುತ್ತಾರೆ. ತಮ್ಮ ಕಷ್ಟ ನಮ್ಮ ನಾಡಿನ ದೊರೆಯ ಕೈ ಸೇರಿದೆ ಎಂದು ಜನರೂ ಸಂತಸ ಪಡುತ್ತಾರೆ. ಹಾಗಾಗಿ ಇಂದಲ್ಲ ನಾಳೆ ಕಷ್ಟಕ್ಕೆ ಪರಿಹಾರ ಸಿಗಬಹುದು ಎಂದು ಆಸೆಯಿಂದ ಕಾಯುತ್ತಿರುತ್ತಾರೆ. ಆದರೆ ಜನಸೇವಕ ಅನ್ನಿಸಿಕೊಂಡ ನಮ್ಮ ಮುಖ್ಯಮಂತ್ರಿಗಳು ಸಾರ್ವಜನಿಕರ ಮನವಿ ಪತ್ರಗಳನ್ನು ಏನು ಮಾಡಿದ್ದಾರೆ ಅನ್ನೋದನ್ನ ನೀವೇ ನೋಡಿ..

ಜು.10 ರಂದು ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದರು. ಆ ವೇಳೆ ರೈತ ಸಂಘದ ನಾಯಕರು ಸಿಎಂ ಸಿದ್ದರಾಮಯ್ಯಗೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ ಪತ್ರಗಳನ್ನು ಕೊಟ್ಟಿದ್ದರು. ಆದರೆ ಈ ಮನವಿ ಪತ್ರಗಳು  ಕಸದ ಬುಟ್ಟಿ ಸೇರಿವೆ. ಮುಖ್ಯಮಂತ್ರಿಗಳನ್ನೇ ಭೇಟಿ ಮಾಡಿ ಮನವಿ ಸಲ್ಲಿಸಿದರೆ ಸಮಸ್ಯೆಗೆ ಪರಿಹಾರ ಆಗುತ್ತದೆ ಎನ್ನುವುದು ಜನರ ಭರವಸೆ. ಆದರೆ ಮುಖ್ಯಮಂತ್ರಿಗಳು ಸ್ವೀಕರಿಸಿದ್ದ ಮನವಿ ಪತ್ರಗಳು ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿವೆ. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಮನವಿ ಸಲ್ಲಿಸಿದ್ದ ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು, ಇದು ನಿರ್ಲಕ್ಷ್ಯದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರೂ ಯಾಕೆ? ರೈತರ ಬಗ್ಗೆ ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿಗೆ ಸಲ್ಲಿಸುವ ಮನವಿಗಳ ಕಥೆ ಏನು ಎಂದು ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ದಲ್ಲಿ ಚಾಮರಾಜನಗರ ಜಿಲ್ಲೆಗೆ ಭೇಟಿ ಮಾಡಿದಾಗ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಸದ ರಾಶಿ ಸೇರಿದ ಮನವಿ ಪತ್ರಗಳ ವೀಡಿಯೋ ವೈರಲ್ ಆಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

11 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

12 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

16 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

17 hours ago