Advertisement
MIRROR FOCUS

ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ….! | ರೈತ ಸಂಘ ನೀಡಿದ್ದ ಮನವಿಯೂ ಕಸಕ್ಕೆ ಸೇರಿತು…! | ರೈತರ ಬಗ್ಗೆಯೂ ಯಾಕಿಷ್ಟು ನಿರ್ಲಕ್ಷ್ಯ- ಆಕ್ರೋಶ |

Share

ಮಳೆ ಬಿಸಿಲು ಲೆಕ್ಕಿಸದೆ ದಿನವಿಡೀ ಸಾಲು ನಿಂತು ತಮ್ಮ ಕಷ್ಟಗಳನ್ನು ಪರಿಹರಿಸಲು ಮನವಿ ಪತ್ರಗಳನ್ನು ಜನರು ಕೊಡುತ್ತಾರೆ. ತಮ್ಮ ಕಷ್ಟ ನಮ್ಮ ನಾಡಿನ ದೊರೆಯ ಕೈ ಸೇರಿದೆ ಎಂದು ಜನರೂ ಸಂತಸ ಪಡುತ್ತಾರೆ. ಹಾಗಾಗಿ ಇಂದಲ್ಲ ನಾಳೆ ಕಷ್ಟಕ್ಕೆ ಪರಿಹಾರ ಸಿಗಬಹುದು ಎಂದು ಆಸೆಯಿಂದ ಕಾಯುತ್ತಿರುತ್ತಾರೆ. ಆದರೆ ಜನಸೇವಕ ಅನ್ನಿಸಿಕೊಂಡ ನಮ್ಮ ಮುಖ್ಯಮಂತ್ರಿಗಳು ಸಾರ್ವಜನಿಕರ ಮನವಿ ಪತ್ರಗಳನ್ನು ಏನು ಮಾಡಿದ್ದಾರೆ ಅನ್ನೋದನ್ನ ನೀವೇ ನೋಡಿ..

ಜು.10 ರಂದು ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದರು. ಆ ವೇಳೆ ರೈತ ಸಂಘದ ನಾಯಕರು ಸಿಎಂ ಸಿದ್ದರಾಮಯ್ಯಗೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ ಪತ್ರಗಳನ್ನು ಕೊಟ್ಟಿದ್ದರು. ಆದರೆ ಈ ಮನವಿ ಪತ್ರಗಳು  ಕಸದ ಬುಟ್ಟಿ ಸೇರಿವೆ. ಮುಖ್ಯಮಂತ್ರಿಗಳನ್ನೇ ಭೇಟಿ ಮಾಡಿ ಮನವಿ ಸಲ್ಲಿಸಿದರೆ ಸಮಸ್ಯೆಗೆ ಪರಿಹಾರ ಆಗುತ್ತದೆ ಎನ್ನುವುದು ಜನರ ಭರವಸೆ. ಆದರೆ ಮುಖ್ಯಮಂತ್ರಿಗಳು ಸ್ವೀಕರಿಸಿದ್ದ ಮನವಿ ಪತ್ರಗಳು ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿವೆ. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಮನವಿ ಸಲ್ಲಿಸಿದ್ದ ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು, ಇದು ನಿರ್ಲಕ್ಷ್ಯದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರೂ ಯಾಕೆ? ರೈತರ ಬಗ್ಗೆ ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿಗೆ ಸಲ್ಲಿಸುವ ಮನವಿಗಳ ಕಥೆ ಏನು ಎಂದು ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ದಲ್ಲಿ ಚಾಮರಾಜನಗರ ಜಿಲ್ಲೆಗೆ ಭೇಟಿ ಮಾಡಿದಾಗ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಸದ ರಾಶಿ ಸೇರಿದ ಮನವಿ ಪತ್ರಗಳ ವೀಡಿಯೋ ವೈರಲ್ ಆಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

21 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago