Advertisement
MIRROR FOCUS

ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ….! | ರೈತ ಸಂಘ ನೀಡಿದ್ದ ಮನವಿಯೂ ಕಸಕ್ಕೆ ಸೇರಿತು…! | ರೈತರ ಬಗ್ಗೆಯೂ ಯಾಕಿಷ್ಟು ನಿರ್ಲಕ್ಷ್ಯ- ಆಕ್ರೋಶ |

Share

ಮಳೆ ಬಿಸಿಲು ಲೆಕ್ಕಿಸದೆ ದಿನವಿಡೀ ಸಾಲು ನಿಂತು ತಮ್ಮ ಕಷ್ಟಗಳನ್ನು ಪರಿಹರಿಸಲು ಮನವಿ ಪತ್ರಗಳನ್ನು ಜನರು ಕೊಡುತ್ತಾರೆ. ತಮ್ಮ ಕಷ್ಟ ನಮ್ಮ ನಾಡಿನ ದೊರೆಯ ಕೈ ಸೇರಿದೆ ಎಂದು ಜನರೂ ಸಂತಸ ಪಡುತ್ತಾರೆ. ಹಾಗಾಗಿ ಇಂದಲ್ಲ ನಾಳೆ ಕಷ್ಟಕ್ಕೆ ಪರಿಹಾರ ಸಿಗಬಹುದು ಎಂದು ಆಸೆಯಿಂದ ಕಾಯುತ್ತಿರುತ್ತಾರೆ. ಆದರೆ ಜನಸೇವಕ ಅನ್ನಿಸಿಕೊಂಡ ನಮ್ಮ ಮುಖ್ಯಮಂತ್ರಿಗಳು ಸಾರ್ವಜನಿಕರ ಮನವಿ ಪತ್ರಗಳನ್ನು ಏನು ಮಾಡಿದ್ದಾರೆ ಅನ್ನೋದನ್ನ ನೀವೇ ನೋಡಿ..

ಜು.10 ರಂದು ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದರು. ಆ ವೇಳೆ ರೈತ ಸಂಘದ ನಾಯಕರು ಸಿಎಂ ಸಿದ್ದರಾಮಯ್ಯಗೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ ಪತ್ರಗಳನ್ನು ಕೊಟ್ಟಿದ್ದರು. ಆದರೆ ಈ ಮನವಿ ಪತ್ರಗಳು  ಕಸದ ಬುಟ್ಟಿ ಸೇರಿವೆ. ಮುಖ್ಯಮಂತ್ರಿಗಳನ್ನೇ ಭೇಟಿ ಮಾಡಿ ಮನವಿ ಸಲ್ಲಿಸಿದರೆ ಸಮಸ್ಯೆಗೆ ಪರಿಹಾರ ಆಗುತ್ತದೆ ಎನ್ನುವುದು ಜನರ ಭರವಸೆ. ಆದರೆ ಮುಖ್ಯಮಂತ್ರಿಗಳು ಸ್ವೀಕರಿಸಿದ್ದ ಮನವಿ ಪತ್ರಗಳು ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿವೆ. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಮನವಿ ಸಲ್ಲಿಸಿದ್ದ ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು, ಇದು ನಿರ್ಲಕ್ಷ್ಯದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರೂ ಯಾಕೆ? ರೈತರ ಬಗ್ಗೆ ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿಗೆ ಸಲ್ಲಿಸುವ ಮನವಿಗಳ ಕಥೆ ಏನು ಎಂದು ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ದಲ್ಲಿ ಚಾಮರಾಜನಗರ ಜಿಲ್ಲೆಗೆ ಭೇಟಿ ಮಾಡಿದಾಗ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಸದ ರಾಶಿ ಸೇರಿದ ಮನವಿ ಪತ್ರಗಳ ವೀಡಿಯೋ ವೈರಲ್ ಆಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago