Advertisement
ಸುದ್ದಿಗಳು

ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಸದಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Share

ಸುಪ್ರೀಂ ಕೋರ್ಟ್ ಆದೇಶದಂತೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ, ಆರಕ್ಷಕ ಠಾಣೆಗಳಿಗೆ ಹಾಗೂ 100 ಕ್ಕಿಂತಲೂ ಹೆಚ್ಚು ಶಾಲಾ ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು.

ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಆ.15 ಮತ್ತು ಜ.26 ರಂದು ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸುತ್ತೇವೆ. ಆದರೆ ಅದೇ ದಿನ ಸಣ್ಣ ಸಣ್ಣ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳು ಕಸ ಮತ್ತು ಚರಂಡಿಗಳಲ್ಲಿ ಕಾಣಸಿಗುತ್ತವೆ. ಪ್ಲಾಸ್ಟಿಕ್ ಧ್ವಜಗಳು ಬೇಗನೆ ನಾಶವಾಗುವುದಿಲ್ಲ ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ. ರಾಜ್ಯ ಸರಕಾರ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಹಾಗೂ ತಹಶೀಲ್ದಾರರಿಗೆ ಮನವಿಯನ್ನು ನೀಡಲಾಯಿತು. ಹಾಗೂ ವಿದ್ಯಾರ್ಥಿಗಳಿಂದ ರಾಷ್ಟ್ರಧ್ವಜದ ಅಪಮಾನ ಅಥವಾ ಅನಾದರವಾಗುವ ಕೃತ್ಯಗಳು ಆಗದಂತೆ ಶಾಲಾ ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು.

ಪ್ಲಾಸ್ಟಿಕ್ ಬಳಸಿ ರಾಷ್ಟ್ರಧ್ವಜದ ಅಪಮಾನ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದರಂತೆ ಕೇಂದ್ರ ಮತ್ತು ರಾಜ್ಯಗೃಹ ಇಲಾಖೆಗಳು ಮತ್ತು ಶಿಕ್ಷಣ ಇಲಾಖೆಗಳು ಸುತ್ತೋಲೆ ಹೊರಡಿಸಿದ್ದವು. ಇದರೊಂದಿಗೆ ಕೇಂದ್ರ ಸರಕಾರ ಪ್ಲಾಸ್ಟಿಕ್ ನಿಷೇಧಿಸಲು ನಿರ್ಧರಿಸಿದೆ. ಅದರ ಪ್ರಕಾರ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ಸಂವಿಧಾನ ಬಾಹಿರವಾಗಿದೆ. ಈ ವರ್ಷವೂ ತ್ರಿವರ್ಣ ಧ್ವಜಗಳ, ಮಾಸ್ಕ್ ಗಳ ಮಾರಾಟ ಹಲವು ಅಂಗಡಿಗಳು ಹಾಗೂ ಇ- ಕಾಮರ್ಸ್ ಜಾಲತಾಣಗಳಲ್ಲಿ ಕಂಡು ಬಂದಿದೆ. ಇಂತಹ ಮಾಸ್ಕ್ ಮಾರಾಟದಿಂದ ರಾಷ್ಟ್ರಧ್ವಜದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ. ತ್ರಿವರ್ಣ ಮಾಸ್ಕ್ ಗಳು ದೇಶಭಕ್ತಿಯ ಪ್ರದರ್ಶನದ ಮಾಧ್ಯಮವಲ್ಲ. ಅಲ್ಲದೆ ಧ್ವಜ ಸಂಹಿತೆಗೆ ಅನುಸಾರ ರಾಷ್ಟ್ರಧ್ವಜವನ್ನು ಈ ರೀತಿ ಬಳಸುವುದು ಧ್ವಜಕ್ಕೆ ಮಾಡಿದ ಅಪಮಾನ. ಇದು ರಾಷ್ಟ್ರೀಯ ಗೌರವದ ಮಾನನಷ್ಟ ತಡೆ ಕಾಯಿದೆ 1971ರ ಉಲ್ಲಂಘನೆಯಾಗಿದೆ. ಆದ್ದರಿಂದ ತ್ರಿವರ್ಣ ಧ್ವಜ ಮಾಸ್ಕ್ ಮಾರಾಟ ಮಾಡುವ ಮತ್ತು ಬಳಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆರಕ್ಷಕ ಠಾಣೆಗಳಿಗೆ ಮನವಿಯನ್ನು ನೀಡಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago