Advertisement
ಸುದ್ದಿಗಳು

ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಸದಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Share

ಸುಪ್ರೀಂ ಕೋರ್ಟ್ ಆದೇಶದಂತೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ, ಆರಕ್ಷಕ ಠಾಣೆಗಳಿಗೆ ಹಾಗೂ 100 ಕ್ಕಿಂತಲೂ ಹೆಚ್ಚು ಶಾಲಾ ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು.

ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಆ.15 ಮತ್ತು ಜ.26 ರಂದು ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸುತ್ತೇವೆ. ಆದರೆ ಅದೇ ದಿನ ಸಣ್ಣ ಸಣ್ಣ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳು ಕಸ ಮತ್ತು ಚರಂಡಿಗಳಲ್ಲಿ ಕಾಣಸಿಗುತ್ತವೆ. ಪ್ಲಾಸ್ಟಿಕ್ ಧ್ವಜಗಳು ಬೇಗನೆ ನಾಶವಾಗುವುದಿಲ್ಲ ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ. ರಾಜ್ಯ ಸರಕಾರ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಹಾಗೂ ತಹಶೀಲ್ದಾರರಿಗೆ ಮನವಿಯನ್ನು ನೀಡಲಾಯಿತು. ಹಾಗೂ ವಿದ್ಯಾರ್ಥಿಗಳಿಂದ ರಾಷ್ಟ್ರಧ್ವಜದ ಅಪಮಾನ ಅಥವಾ ಅನಾದರವಾಗುವ ಕೃತ್ಯಗಳು ಆಗದಂತೆ ಶಾಲಾ ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು.

ಪ್ಲಾಸ್ಟಿಕ್ ಬಳಸಿ ರಾಷ್ಟ್ರಧ್ವಜದ ಅಪಮಾನ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದರಂತೆ ಕೇಂದ್ರ ಮತ್ತು ರಾಜ್ಯಗೃಹ ಇಲಾಖೆಗಳು ಮತ್ತು ಶಿಕ್ಷಣ ಇಲಾಖೆಗಳು ಸುತ್ತೋಲೆ ಹೊರಡಿಸಿದ್ದವು. ಇದರೊಂದಿಗೆ ಕೇಂದ್ರ ಸರಕಾರ ಪ್ಲಾಸ್ಟಿಕ್ ನಿಷೇಧಿಸಲು ನಿರ್ಧರಿಸಿದೆ. ಅದರ ಪ್ರಕಾರ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ಸಂವಿಧಾನ ಬಾಹಿರವಾಗಿದೆ. ಈ ವರ್ಷವೂ ತ್ರಿವರ್ಣ ಧ್ವಜಗಳ, ಮಾಸ್ಕ್ ಗಳ ಮಾರಾಟ ಹಲವು ಅಂಗಡಿಗಳು ಹಾಗೂ ಇ- ಕಾಮರ್ಸ್ ಜಾಲತಾಣಗಳಲ್ಲಿ ಕಂಡು ಬಂದಿದೆ. ಇಂತಹ ಮಾಸ್ಕ್ ಮಾರಾಟದಿಂದ ರಾಷ್ಟ್ರಧ್ವಜದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ. ತ್ರಿವರ್ಣ ಮಾಸ್ಕ್ ಗಳು ದೇಶಭಕ್ತಿಯ ಪ್ರದರ್ಶನದ ಮಾಧ್ಯಮವಲ್ಲ. ಅಲ್ಲದೆ ಧ್ವಜ ಸಂಹಿತೆಗೆ ಅನುಸಾರ ರಾಷ್ಟ್ರಧ್ವಜವನ್ನು ಈ ರೀತಿ ಬಳಸುವುದು ಧ್ವಜಕ್ಕೆ ಮಾಡಿದ ಅಪಮಾನ. ಇದು ರಾಷ್ಟ್ರೀಯ ಗೌರವದ ಮಾನನಷ್ಟ ತಡೆ ಕಾಯಿದೆ 1971ರ ಉಲ್ಲಂಘನೆಯಾಗಿದೆ. ಆದ್ದರಿಂದ ತ್ರಿವರ್ಣ ಧ್ವಜ ಮಾಸ್ಕ್ ಮಾರಾಟ ಮಾಡುವ ಮತ್ತು ಬಳಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆರಕ್ಷಕ ಠಾಣೆಗಳಿಗೆ ಮನವಿಯನ್ನು ನೀಡಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

7 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago