ಏಕಬಳಕೆ ಪ್ಲಾಸ್ಟಿಕ್ ತ್ಯಜಿಸಲು ಸಂಕಲ್ಪ ಮಾಡಿ | ಸಚಿವ ಈಶ್ವರ ಖಂಡ್ರೆ

February 6, 2024
6:22 AM
ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಜಿಸಲು ಸಲಹೆ ನೀಡಿದ ಸಚಿವ ಈಶ್ವರ ಖಂಡ್ರೆ.

ನೀರಲ್ಲಿ ಕರಗದ, ಮಣ್ಣಲ್ಲಿ ಮಣ್ಣಾಗದ, ಸುಟ್ಟರೆ ವಿಷಕಾರಿ ಅಂಶವನ್ನು ಗಾಳಿಗೆ ಸೇರಿಸುವ ಪ್ಲಾಸ್ಟಿಕ್ ಸಮುದಾಯ ಆರೋಗ್ಯಕ್ಕೆ ಮಾರಕವಾಗಿದ್ದು, ಭೂಗ್ರಹ ರಕ್ಷಣೆಗೆ ಎಲ್ಲ ಪ್ರಜ್ಞಾವಂತ ನಾಗರಿಕರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಸಂಕಲ್ಪ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ.

ಅವರು  ಧರ್ಮಸ್ಥಳದಲ್ಲಿ, ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಕ್ಷೇತ್ರ ಫಲಕ ಅನಾವರಣ ಮಾಡಿ ಮಾತನಾಡಿದರು. ಮರುಬಳಕೆ ಪ್ರವೃತ್ತಿ ಜನರಲ್ಲಿ ಕಡಿಮೆ ಆಗಿದ್ದು, ತ್ಯಾಜ್ಯ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತ್ಯಾಜ್ಯ ವಿಲೇವಾರಿ ಸ್ಥಳೀಯ ಸಂಸ್ಥೆಗಳಿಗೆ ಸವಾಲಾಗಿದೆ. ಅದರಲ್ಲೂ ಪ್ಲಾಸ್ಟಿಕ್ ತ್ಯಾಜ್ಯ ದೊಡ್ಡ ಸವಾಲಾಗಿದ್ದು, ಜನರಲ್ಲಿ ಜಾಗೃತಿ ಮೂಡದ ಹೊರತು ಇದಕ್ಕೆ ಪರಿಹಾರ ದೊರಕುವುದು ದುರ್ಲಭ ಎಂದು ಸಚಿವರು ಹೇಳಿದರು.

ಅರಣ್ಯ ನಾಶ, ಪ್ರಕೃತಿಯ ಮೇಲಿನ ದಬ್ಬಾಳಿಕೆಯಿಂದ ಇಂದು ಜಾಗತಿಕ ತಾಪಮಾನ ಏರಿಕೆ ಆಗುತ್ತಿದೆ, ಹವಾಮಾನ ವೈಪರೀತ್ಯದಿಂದ ಜಾಗತಿಕ ಸಮಸ್ಯೆಗಳು ತಲೆದೋರುತ್ತಿವೆ, ಅಭಿವೃದ್ಧಿಯೂ ಆಗಬೇಕು, ಪ್ರಕೃತಿಯೂ ಉಳಿಯಬೇಕು ಹೀಗಾಗಿ ಸುಸ್ಥಿರ ಅಭಿವೃದ್ಧಿ ಇಂದಿನ ಅತ್ಯಗತ್ಯವಾಗಿದೆ ಎಂದು ಹೇಳಿದರು.ಆಹಾರದಲ್ಲಿ ಮಾಲಿನ್ಯ ಇದೆ, ಗಾಳಿಯಲ್ಲಿ ಮಾಲಿನ್ಯ ಇದೆ, ನೀರಿನಲ್ಲಿ ಮಾಲಿನ್ಯ ಇದೆ. ಇದರಿಂದ ಅನೇಕ ರೋಗ ರುಜಿನಗಳು ಜನರನ್ನು ಕಾಡುತ್ತಿದ್ದು, ಸಮುದಾಯ ಆರೋಗ್ಯ ರಕ್ಷಣೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.

ಪಾದಯಾತ್ರೆ ವೇಳೆ ಪ್ಲಾಸ್ಟಿಕ್ ನಿಷೇಧ : ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿಯ ಸಂದರ್ಭದಲ್ಲಿ ಸಾವಿರಾರು ಜನರು ಪಾದಯಾತ್ರೆಯ ಮೂಲಕ ಬರುತ್ತಾರೆ. ಅರಣ್ಯ ಮಾರ್ಗದಲ್ಲಿ ಬರುವಾಗ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ತಟ್ಟೆ, ಲೋಟ, ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದನ್ನು ವನ್ಯಜೀವಿಗಳು ತಿಂದು ಸಾವಿಗೀಡಾಗುತ್ತವೆ. ಹೀಗಾಗಿ ಈ ಬಾರಿ ಪಾದಯಾತ್ರೆಯಲ್ಲಿ ಬರುವ ಭಕ್ತರು ಅರಣ್ಯ ಪ್ರವೇಶಿಸುವ ಮುನ್ನ ತಪಾಸಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಧರ್ಮಸ್ಥಳ ಸ್ವಚ್ಛ ನಗರಿಯಾಗಿದ್ದು, ಇಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಶ್ರಮಿಸುತ್ತಿದ್ದೇವೆ. ಆದರೆ ಜನರಲ್ಲಿ ಸ್ವಯಂ ಪರಿಸರ ಜಾಗೃತಿ ಮೂಡಿದರೆ ಮಾತ್ರ ಇದನ್ನು ನಿಗ್ರಹಿಸಲು ಸಾಧ್ಯ ಎಂದರು.

ಆಧುನಿಕ ಯಂತ್ರಗಳ ನೆರವಿನಿಂದ ತ್ಯಾಜ್ಯವನ್ನು ಸಂಸ್ಕರಿಸಿ ಪುನರ್ ಬಳಕೆ ಮಾಡಲು ಆ ಮೂಲಕ ಸುಸ್ಥಿರ ಅಭಿವೃದ್ಧಿಗೆ ಕ್ಷೇತ್ರ ಒತ್ತು ನೀಡಿದೆ ಎಂದು ತಿಳಿಸಿದರು. ಜನರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವಂತೆ ಕರೆ ನೀಡಿದರು.

Forest and Environment Minister Ishwara B Khandre has requested that plastic which does not dissolve in water, does not dissolve in soil, and adds toxic elements to the air if burned, is harmful to community health, and all conscious citizens should resolve to abandon the use of single-use plastic to protect the planet.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror