Advertisement
MIRROR FOCUS

ಏಕಬಳಕೆ ಪ್ಲಾಸ್ಟಿಕ್ ತ್ಯಜಿಸಲು ಸಂಕಲ್ಪ ಮಾಡಿ | ಸಚಿವ ಈಶ್ವರ ಖಂಡ್ರೆ

Share

ನೀರಲ್ಲಿ ಕರಗದ, ಮಣ್ಣಲ್ಲಿ ಮಣ್ಣಾಗದ, ಸುಟ್ಟರೆ ವಿಷಕಾರಿ ಅಂಶವನ್ನು ಗಾಳಿಗೆ ಸೇರಿಸುವ ಪ್ಲಾಸ್ಟಿಕ್ ಸಮುದಾಯ ಆರೋಗ್ಯಕ್ಕೆ ಮಾರಕವಾಗಿದ್ದು, ಭೂಗ್ರಹ ರಕ್ಷಣೆಗೆ ಎಲ್ಲ ಪ್ರಜ್ಞಾವಂತ ನಾಗರಿಕರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಸಂಕಲ್ಪ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ.

ಅವರು  ಧರ್ಮಸ್ಥಳದಲ್ಲಿ, ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಕ್ಷೇತ್ರ ಫಲಕ ಅನಾವರಣ ಮಾಡಿ ಮಾತನಾಡಿದರು. ಮರುಬಳಕೆ ಪ್ರವೃತ್ತಿ ಜನರಲ್ಲಿ ಕಡಿಮೆ ಆಗಿದ್ದು, ತ್ಯಾಜ್ಯ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತ್ಯಾಜ್ಯ ವಿಲೇವಾರಿ ಸ್ಥಳೀಯ ಸಂಸ್ಥೆಗಳಿಗೆ ಸವಾಲಾಗಿದೆ. ಅದರಲ್ಲೂ ಪ್ಲಾಸ್ಟಿಕ್ ತ್ಯಾಜ್ಯ ದೊಡ್ಡ ಸವಾಲಾಗಿದ್ದು, ಜನರಲ್ಲಿ ಜಾಗೃತಿ ಮೂಡದ ಹೊರತು ಇದಕ್ಕೆ ಪರಿಹಾರ ದೊರಕುವುದು ದುರ್ಲಭ ಎಂದು ಸಚಿವರು ಹೇಳಿದರು.

ಅರಣ್ಯ ನಾಶ, ಪ್ರಕೃತಿಯ ಮೇಲಿನ ದಬ್ಬಾಳಿಕೆಯಿಂದ ಇಂದು ಜಾಗತಿಕ ತಾಪಮಾನ ಏರಿಕೆ ಆಗುತ್ತಿದೆ, ಹವಾಮಾನ ವೈಪರೀತ್ಯದಿಂದ ಜಾಗತಿಕ ಸಮಸ್ಯೆಗಳು ತಲೆದೋರುತ್ತಿವೆ, ಅಭಿವೃದ್ಧಿಯೂ ಆಗಬೇಕು, ಪ್ರಕೃತಿಯೂ ಉಳಿಯಬೇಕು ಹೀಗಾಗಿ ಸುಸ್ಥಿರ ಅಭಿವೃದ್ಧಿ ಇಂದಿನ ಅತ್ಯಗತ್ಯವಾಗಿದೆ ಎಂದು ಹೇಳಿದರು.ಆಹಾರದಲ್ಲಿ ಮಾಲಿನ್ಯ ಇದೆ, ಗಾಳಿಯಲ್ಲಿ ಮಾಲಿನ್ಯ ಇದೆ, ನೀರಿನಲ್ಲಿ ಮಾಲಿನ್ಯ ಇದೆ. ಇದರಿಂದ ಅನೇಕ ರೋಗ ರುಜಿನಗಳು ಜನರನ್ನು ಕಾಡುತ್ತಿದ್ದು, ಸಮುದಾಯ ಆರೋಗ್ಯ ರಕ್ಷಣೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.

ಪಾದಯಾತ್ರೆ ವೇಳೆ ಪ್ಲಾಸ್ಟಿಕ್ ನಿಷೇಧ : ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿಯ ಸಂದರ್ಭದಲ್ಲಿ ಸಾವಿರಾರು ಜನರು ಪಾದಯಾತ್ರೆಯ ಮೂಲಕ ಬರುತ್ತಾರೆ. ಅರಣ್ಯ ಮಾರ್ಗದಲ್ಲಿ ಬರುವಾಗ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ತಟ್ಟೆ, ಲೋಟ, ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದನ್ನು ವನ್ಯಜೀವಿಗಳು ತಿಂದು ಸಾವಿಗೀಡಾಗುತ್ತವೆ. ಹೀಗಾಗಿ ಈ ಬಾರಿ ಪಾದಯಾತ್ರೆಯಲ್ಲಿ ಬರುವ ಭಕ್ತರು ಅರಣ್ಯ ಪ್ರವೇಶಿಸುವ ಮುನ್ನ ತಪಾಸಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಧರ್ಮಸ್ಥಳ ಸ್ವಚ್ಛ ನಗರಿಯಾಗಿದ್ದು, ಇಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಶ್ರಮಿಸುತ್ತಿದ್ದೇವೆ. ಆದರೆ ಜನರಲ್ಲಿ ಸ್ವಯಂ ಪರಿಸರ ಜಾಗೃತಿ ಮೂಡಿದರೆ ಮಾತ್ರ ಇದನ್ನು ನಿಗ್ರಹಿಸಲು ಸಾಧ್ಯ ಎಂದರು.

ಆಧುನಿಕ ಯಂತ್ರಗಳ ನೆರವಿನಿಂದ ತ್ಯಾಜ್ಯವನ್ನು ಸಂಸ್ಕರಿಸಿ ಪುನರ್ ಬಳಕೆ ಮಾಡಲು ಆ ಮೂಲಕ ಸುಸ್ಥಿರ ಅಭಿವೃದ್ಧಿಗೆ ಕ್ಷೇತ್ರ ಒತ್ತು ನೀಡಿದೆ ಎಂದು ತಿಳಿಸಿದರು. ಜನರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವಂತೆ ಕರೆ ನೀಡಿದರು.

Forest and Environment Minister Ishwara B Khandre has requested that plastic which does not dissolve in water, does not dissolve in soil, and adds toxic elements to the air if burned, is harmful to community health, and all conscious citizens should resolve to abandon the use of single-use plastic to protect the planet.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

13 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago