ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೋಯಲ್ ಅವರಲ್ಲಿ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ವಾಣಿಜ್ಯ ಸಚಿವರನ್ನು ಭೇಟಿ ಮಾಡಿದ ಕಾಗೇರಿ, ಸಂಬಾರ ಮಂಡಳಿ ದರ ಪಟ್ಟಿಯಲ್ಲಿ ಕೇವಲ ಕೊಚ್ಚಿಯ ಕಪ್ಪುಮೆಣಸು ಎಂದು ಮಾತ್ರ ನಮೂದಿಸಲಾಗುತ್ತಿದೆ ಎಂದು ತಿಳಿಸಿದರು. ಉತ್ತರ ಕನ್ನಡ ಜಿಲ್ಲೆ ದೇಶದಲ್ಲೇ ಕಾಳುಮೆಣಸು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಈ ಬೆಳೆಯ ಮಾರುಕಟ್ಟೆ ಕೇಂದ್ರ ಸ್ಥಳವಾದ ಶಿರಸಿ ಕಾಳುಮೆಣಸು ಬೆಲೆಯನ್ನು ಕೂಡ ಪ್ರತ್ಯೇಕವಾಗಿ ಸಂಬಾರ ಮಂಡಳಿಯ ಅಧಿಕೃತ ದರಪಟ್ಟಿಯಲ್ಲಿ ನಿತ್ಯ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ರೈತರಿಗೆ ಗುಣಮಟ್ಟದ ಬೆಳೆಗೆ ಯೋಗ್ಯ ದರ ಸಿಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…