ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೋಯಲ್ ಅವರಲ್ಲಿ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ವಾಣಿಜ್ಯ ಸಚಿವರನ್ನು ಭೇಟಿ ಮಾಡಿದ ಕಾಗೇರಿ, ಸಂಬಾರ ಮಂಡಳಿ ದರ ಪಟ್ಟಿಯಲ್ಲಿ ಕೇವಲ ಕೊಚ್ಚಿಯ ಕಪ್ಪುಮೆಣಸು ಎಂದು ಮಾತ್ರ ನಮೂದಿಸಲಾಗುತ್ತಿದೆ ಎಂದು ತಿಳಿಸಿದರು. ಉತ್ತರ ಕನ್ನಡ ಜಿಲ್ಲೆ ದೇಶದಲ್ಲೇ ಕಾಳುಮೆಣಸು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಈ ಬೆಳೆಯ ಮಾರುಕಟ್ಟೆ ಕೇಂದ್ರ ಸ್ಥಳವಾದ ಶಿರಸಿ ಕಾಳುಮೆಣಸು ಬೆಲೆಯನ್ನು ಕೂಡ ಪ್ರತ್ಯೇಕವಾಗಿ ಸಂಬಾರ ಮಂಡಳಿಯ ಅಧಿಕೃತ ದರಪಟ್ಟಿಯಲ್ಲಿ ನಿತ್ಯ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ರೈತರಿಗೆ ಗುಣಮಟ್ಟದ ಬೆಳೆಗೆ ಯೋಗ್ಯ ದರ ಸಿಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…