ಬೆಂಗಳೂರಿನ ICAR-NBAIR ನಲ್ಲಿ ಕೀಟ ನಿರ್ವಹಣೆ ಮತ್ತು ಜೀವಿ ವೈವಿಧ್ಯತೆ ಸಂರಕ್ಷಣೆ ಕುರಿತ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. 2023-24ರಲ್ಲಿ 63 ಹೊಸ ಕೀಟ ಪ್ರಭೇದಗಳನ್ನು ಕಂಡುಹಿಡಿಯುವ ಮೂಲಕ ಜೀವಿ ವೈವಿಧ್ಯತೆ ಕುರಿತು ಅನ್ವೇಷಣೆ ನಡೆಸಲಾಗಿದೆ.
ಕೃಷಿಯಲ್ಲಿ ಕಂಡು ಬರುವ ಪ್ರಮುಖ ಕೀಟಗಳ ವೈಜ್ಞಾನಿಕ ತಿಳುವಳಿಕೆಯನ್ನು ಹೆಚ್ಚಿಸಲು ಈ ಅನ್ವೇಷಣೆ ಸಹಕಾರಿಯಾಗಿದೆ. ಹತ್ತಿ, ಸೇಬು, ಮಾವು ಹೀಗೆ ಹಲವು ರೀತಿಯಲ್ಲಿ ಕಂಡು ಬರುವ ಕೀಟಗಳನ್ನು ಸಂಗ್ರಹಿಸಲಾಗಿದ್ದು, ಅವುಳಿಂದ ಬೆಳೆಗೆ ಆಗುವ ನಷ್ಟದ ಕುರಿತು ಅನ್ವೇಷಣೆ ನಡೆಸಲಾಗಿದೆ. ಈ ಮಧ್ಯೆ, ಸ್ವಚ್ಛತಾ ಹೀ ಸೇವೆಯ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸಿರುವ ಜನಾಂದೋಲನದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ.
ಈ ಸಂದರ್ಭ ಮಾತನಾಡಿದ ಡಾ. ಎಸ್ ಎನ್ ಸುಶೀಲ್, ಕೀಟಗಳ ಸಂಶೋದನೆಗೆ ಹೆಚ್ಚು ಒತ್ತು ನೀಡಲಾಗಿದ್ದು, ರೈತರಿಗೆ ಅನುಕೂಲವಾಗುವಂತಹ ವಾತಾವರಣವನ್ನು ನಿರ್ಮಿಸಲು ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ನೇಪಾಳದಲ್ಲಿ ಇತ್ತೀಚಿಗೆ ಎಡೆಬಿಡದೆ ಸುರಿದ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹಕ್ಕೆ ಬಲಿಯಾದವರ…
ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ…
ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲವಾದ ಅವಕಾಶಗಳಿದ್ದು, ಪಶ್ಚಿಮಘಟ್ಟ, ಅರಣ್ಯ, ನದಿ ಮತ್ತು…
ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ…
ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು…
ಕೋಲಾರ ಜಿಲ್ಲೆಯ 9 ಮಂದಿ ರೈತರು ಕೇಂದ್ರ ಸರ್ಕಾರದಿಂದ ಸಹಾಯಧನದೊಂದಿಗೆ ಸೌರ ವಿದ್ಯುತ್…