Advertisement
Opinion

ಜಾಗೃತ ಮನಸ್ಸುಗಳ ಜವಾಬ್ದಾರಿ | ಮುಂದಿನ ದಿನಗಳು ಮತ್ತಷ್ಟು ಹದಗೆಡುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ |

Share

ಚಳಿ(Cold) ತಡೆಯಲಾರದೆ ರಸ್ತೆ ಬದಿಯಲ್ಲಿ(Road side) ಮಲಗಿರುವ ಮಗು, ಒಂದು ತುತ್ತು ಅನ್ನಕ್ಕಾಗಿ(Meal) ದೇವ ಮಂದಿರಗಳ(Temple) ಮುಂದೆ ಹಸಿವಿನಿಂದ ಅಂಗಲಾಚುತ್ತಿರುವ ಪುಟ್ಟ ಕಂದ(Hungry child), ತನ್ನ ಹಾಗೂ ತನ್ನ ನಂಬಿದವರ ಊಟಕ್ಕಾಗಿ ಯಾರೋ ಅಪರಿಚಿತನಿಗೆ ದೇಹ ಅರ್ಪಿಸುವ ಹೆಣ್ಣು(Lady), ಹಸಿವು ನೀಗಿಕೊಳ್ಳಲು, ಸಂಸಾರ ನಡೆಸಲು ಇತರರ ಮಲ ಹೊತ್ತು ಸಾಗುವ ವ್ಯಕ್ತಿ, ರೋಗ(Unhealthy) ಉಲ್ಬಣಿಸಿದ್ದರೂ ಚಿಕಿತ್ಸೆ(Treatment) ಪಡೆಯಲು ಕಾಸಿಲ್ಲದೆ ಸಾವನ್ನು ಎದುರು ನೋಡುತ್ತಿರುವ ಜೀವ, ತಾನು ಮಾಡದ ತಪ್ಪಿಗೆ ಜ್ಯೆಲುಪಾಲಾಗಿ(Prisoned) ಕೋರ್ಟನಿಂದ(Court) ಜಾಮೀನು ಸಿಕ್ಕರೂ ಶ್ಯೂರಿಟಿ ಇಲ್ಲದೇ ವರ್ಷಾನುಗಟ್ಟಲೆ ಜ್ಯೆಲಿನಲ್ಲಿ ಕೊಳೆಯುತ್ತಿರುವ ನತದೃಷ್ಟರು..

ಓದುವ ಆಸೆ ಇದ್ದರು ಬಡತನದಿಂದ ಸಾಧ್ಯವಾಗದೆ ಹೋಟೆಲ್ಲಿನಲ್ಲಿ ದಿನದ 18 ಗಂಟೆ ದುಡಿಯುವ ಪುಟ್ಟ ಕಂದಮ್ಮಗಳು, ಮದುವೆ ವಯಸ್ಸು ಮೀರಿದ್ದರೂ ಮದುವೆಯಾಗದೆ ತನ್ನ ಓರಗೆಯವರು ತಮ್ಮ ಮಕ್ಕಳೊಂದಿಗೆ ಆಟವಾಡುವುದನ್ನು ನೋಡುತ್ತಾ ತನ್ನ ದರಿದ್ರ ದುರಾದೃಷ್ಟದ ಅಸಹಾಯಕತೆಗೆ ಕೊರಗುವ ಅಬಲೆ.. ಸೇಬು, ಐಸ್ ಕ್ರೀಮ್, ಡ್ರೈಪ್ರೂಟ್ಸ್ ಗಳನ್ನು ಜೀವನದಲ್ಲಿ ಒಮ್ಮೆಯೂ ಸವಿಯದ ಕೋಟ್ಯಾಂತರ ಜನ ವಾಸಿಸುತ್ತಿರುವ ಈ ನಮ್ಮ ಸಮಾಜದಲ್ಲಿ, ರಾಜಕಾರಣಿಗಳು ಆಡಳಿತಗಾರರು, ಸಿನಿಮಾ ನಟರು, ಪತ್ರಿಕೋದ್ಯಮಿಗಳು, ವ್ಯಾಪಾರಿಗಳು, ಸಾಹಿತಿಗಳು, ಮಠಾಧೀಶರು, ಇತ್ಯಾದಿ, ಇತ್ಯಾದಿಗಳು..

ಮಹಾನ್ ನಾಗರೀಕರಂತೆ, ಇರುವ – ಇಲ್ಲದ – ದೇವರು ಧರ್ಮ, ಜಾತಿ, ತತ್ವ ಸಿದ್ಧಾಂತ, ವಾಕ್ ಚಾತುರ್ಯಗಳನ್ನು ಪ್ರದರ್ಶಿಸುತ್ತಾ, ತಮಗೂ ಇದಕ್ಕೂ ಸಂಬಂಧವಿಲ್ಲದಿರುವಂತೆ ಜೀವಿಸುತ್ತಿರುವುದನ್ನು, ನೋಡಿದರೆ, ಈ ಅಭಿವೃದ್ಧಿ ಮತ್ತು ಚಿಂತನೆಗಳ ಕ್ರಮವನ್ನೇ ಪ್ರಶ್ನಿಸಿಕೊಳ್ಳಬೇಕೆನಿಸುತ್ತದೆ. ಕನಿಷ್ಠ ಮಟ್ಟದ ನಾಗರಿಕ ಸೌಲಭ್ಯಗಳನ್ನು ಈ ಜನರಿಗೆ ತಲುಪಿಸಲು ಸಾಧ್ಯವಾಗದ ವ್ಯವಸ್ಥೆಯ ಬಗ್ಗೆ ಜಿಗುಪ್ಸೆ ಮೂಡುತ್ತದೆ.

ಎಷ್ಟೊಂದು ಕ್ರಮಬದ್ಧ ಆಡಳಿತ ವ್ಯವಸ್ಥೆ ಇದೆ. ಗ್ರಾಮ ಪಂಚಾಯತಿಯಿಂದ ಕೇಂದ್ರ ಸರ್ಕಾರದವರೆಗೆ ಮತ್ತು ಇದನ್ನು ನಿರ್ವಹಿಸುವವರು ಶಿಶಿವಿಹಾರದಿಂದ ಡಾಕ್ಟರೇಟ್ ವರೆಗೆ ಓದಿರುತ್ತಾರೆ. ಸಾಕಷ್ಟು ಸಂಬಳ ಮತ್ತು ಇತರ ಸೌಲಭ್ಯಗಳನ್ನು ಪಡೆಯುತ್ತಾರೆ. ಇದನ್ನು ಬೇರೆ ಬೇರೆ ರೀತಿಯಲ್ಲಿ ನಿಯಂತ್ರಿಸಲು ಸಹಕರಿಸಲು ಮೇಲ್ವಿಚಾರಣೆ ನಡೆಸಲು ಅನೇಕ ಮತ್ತಷ್ಟು ಸರ್ಕಾರಿ ಸಂಸ್ಥೆಗಳೇ ಇವೆ. ಆದರೂ ಸಾಕಷ್ಟು ಉತ್ತಮ ವಾತಾವರಣ ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಹೌದು, ಒಂದಷ್ಟು ಜನ ಇದರ ಸಂಪೂರ್ಣ ಲಾಭ ಪಡೆದು ಸುಖವಾಗಿದ್ದಾರೆ. ಅವರುಗಳಿಗೆ ಯಾವುದೇ ತಕರಾರು ಇಲ್ಲ.

ಹಾಗೆಂದು ಜಾಗೃತಗೊಂಡ ಮನಸ್ಸುಗಳು ಸುಮ್ಮನೆ ಇರಬಾರದು. ಯಾವುದಾದರೂ ರೀತಿಯಲ್ಲಿ ಈ ವ್ಯವಸ್ಥೆಯ ನಾಗರಿಕ ಸೌಲಭ್ಯಗಳನ್ನು ವಂಚಿತರಿಗೆ ತಲುಪಿಸಲು ಪ್ರಯತ್ನಿಸಬೇಕಿದೆ. ಇಲ್ಲದಿದ್ದರೆ ಮುಂದೆ ಈ ಅಂತರ ಹೆಚ್ಚಾದಂತೆ ಈಗ ನೆಮ್ಮದಿಯಿಂದ ಇರುವವರ ಅನುಕೂಲಗಳಿಗೂ ತೊಂದರೆಯಾಗುವ ಸಾಧ್ಯತೆ ಇದೆ. ಕ್ರಿಯಾತ್ಮಕ ಮಾನವೀಯ ಮನಸ್ಸುಗಳು ಈ ಬಗ್ಗೆ ಮತ್ತಷ್ಟು ಚಿಂತಿಸುವುದು ವ್ಯವಸ್ಥೆಯ ಸುಧಾರಣೆಯ ದೃಷ್ಟಿಯಿಂದ ತುಂಬಾ ಅವಶ್ಯಕತೆ ಇದೆ. ಮುಂದಿನ ದಿನಗಳು ಮತ್ತಷ್ಟು ಹದಗೆಡುವ ಮುನ್ನ ಎಚ್ಚರಿಕೆಯಿಂದ ಮುನ್ನಡೆಯಬೇಕಿದೆ..

ಬರಹ :
ವಿವೇಕಾನಂದ. ಎಚ್.ಕೆ
.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

2 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

2 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

10 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

10 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago