ಭಾರೀ ಮಳೆಯ ನಡುವೆ ಅಧಿಕಾರಿಗಳು ಸೇವೆ ನೆರವೇರಿಸಿದರು. ಮಳೆಯ ಕಾರಣದಿಂದ ಕಡಿತಗೊಂಡಿದ್ದ ಸಂಪರ್ಕ ರಸ್ತೆಯನ್ನು ಮರು ನಿರ್ಮಾಣ ಮಾಡುವ ಮೂಲಕ ಶ್ಲಾಘನೆಗೆ ಪಾತ್ರವಾಗಿದ್ದಾರೆ. ಗ್ರಾಮೀಣ ಭಾಗದಲ್ಲಿಯೂ ಮಳೆಯ ಕಾರಣದಿಂದ ಹಲವು ಸಮಸ್ಯೆಗಳಾಗುತ್ತವೆ. ಇಂತಹ ಸಂದರ್ಭಗಳಲ್ಲಿ ಮಾಡಬಹುದಾದ ಕಾರ್ಯಗಳಿಗೆ ಇದೊಂದು ಮಾದರಿ.
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಭಾರೀ ಮಳೆಗೆ ಡಿಟ್ಟೆ ಡೈಮ್-ಮಿಗ್ಗಿಂಗ್ ರಸ್ತೆಯ ಸಿಯಾಂಗ್ ನದಿಯ ಉಪನದಿಗೆ ಕಟ್ಟಲಾಗಿರುವ 80 ಅಡಿ ಸೇತುವೆಯ ಮೇಲೆ ಮಣ್ಣು, ಕಲ್ಲು ಕುಸಿದ ಕಾರಣದಿಂದ ರಸ್ತೆ ಸಂಪರ್ಕವು ಕಡಿತಗೊಂಡಿತು. ಪರಿಣಾಮವಾಗಿ ಟ್ಯೂಟಿಂಗ್ ಉಪವಿಭಾಗದಂತಹ ಗಡಿ ಪ್ರದೇಶಗಳು ಸಂಪೂರ್ಣವಾಗಿ ಕಡಿತಗೊಂಡವು.
ತಕ್ಷಣವೇ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ಒ) ಸಿಬಂದಿಗಳು 72 ಗಂಟೆಗಳಲ್ಲಿ ಮರುಸಂಪರ್ಕ ಕಲ್ಪಿಸಿದ್ದಾರೆ. ಬಾರ್ಡರ್ ರೋಡ್ಸ್ ಟಾಸ್ಕ್ ಫೋರ್ಸ್ (ಬಿಆರ್ಟಿಎಫ್) ಅಧಿಕಾರಿ ಒ ಟಾಕಿ ಮಾತನಾಡಿ, ಭಾರಿ ಮಳೆಯ ನಡುವೆಯೂ, ಬಿಆರ್ಒ ಸಿಬ್ಬಂದಿ ರಸ್ತೆ ತಿರುವುವನ್ನು ಪೂರ್ಣಗೊಳಿಸಿ ಎಲ್ಲಾ ರೀತಿಯ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದರು ಎಂದು ಹೇಳಿದ್ದಾರೆ.
(Source : ANI)
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.