ಭಾರೀ ಮಳೆಯ ನಡುವೆ ಅಧಿಕಾರಿಗಳು ಸೇವೆ ನೆರವೇರಿಸಿದರು. ಮಳೆಯ ಕಾರಣದಿಂದ ಕಡಿತಗೊಂಡಿದ್ದ ಸಂಪರ್ಕ ರಸ್ತೆಯನ್ನು ಮರು ನಿರ್ಮಾಣ ಮಾಡುವ ಮೂಲಕ ಶ್ಲಾಘನೆಗೆ ಪಾತ್ರವಾಗಿದ್ದಾರೆ. ಗ್ರಾಮೀಣ ಭಾಗದಲ್ಲಿಯೂ ಮಳೆಯ ಕಾರಣದಿಂದ ಹಲವು ಸಮಸ್ಯೆಗಳಾಗುತ್ತವೆ. ಇಂತಹ ಸಂದರ್ಭಗಳಲ್ಲಿ ಮಾಡಬಹುದಾದ ಕಾರ್ಯಗಳಿಗೆ ಇದೊಂದು ಮಾದರಿ.
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಭಾರೀ ಮಳೆಗೆ ಡಿಟ್ಟೆ ಡೈಮ್-ಮಿಗ್ಗಿಂಗ್ ರಸ್ತೆಯ ಸಿಯಾಂಗ್ ನದಿಯ ಉಪನದಿಗೆ ಕಟ್ಟಲಾಗಿರುವ 80 ಅಡಿ ಸೇತುವೆಯ ಮೇಲೆ ಮಣ್ಣು, ಕಲ್ಲು ಕುಸಿದ ಕಾರಣದಿಂದ ರಸ್ತೆ ಸಂಪರ್ಕವು ಕಡಿತಗೊಂಡಿತು. ಪರಿಣಾಮವಾಗಿ ಟ್ಯೂಟಿಂಗ್ ಉಪವಿಭಾಗದಂತಹ ಗಡಿ ಪ್ರದೇಶಗಳು ಸಂಪೂರ್ಣವಾಗಿ ಕಡಿತಗೊಂಡವು.
ತಕ್ಷಣವೇ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ಒ) ಸಿಬಂದಿಗಳು 72 ಗಂಟೆಗಳಲ್ಲಿ ಮರುಸಂಪರ್ಕ ಕಲ್ಪಿಸಿದ್ದಾರೆ. ಬಾರ್ಡರ್ ರೋಡ್ಸ್ ಟಾಸ್ಕ್ ಫೋರ್ಸ್ (ಬಿಆರ್ಟಿಎಫ್) ಅಧಿಕಾರಿ ಒ ಟಾಕಿ ಮಾತನಾಡಿ, ಭಾರಿ ಮಳೆಯ ನಡುವೆಯೂ, ಬಿಆರ್ಒ ಸಿಬ್ಬಂದಿ ರಸ್ತೆ ತಿರುವುವನ್ನು ಪೂರ್ಣಗೊಳಿಸಿ ಎಲ್ಲಾ ರೀತಿಯ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದರು ಎಂದು ಹೇಳಿದ್ದಾರೆ.
(Source : ANI)
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…