ಭಾರೀ ಮಳೆಯ ನಡುವೆ ಅಧಿಕಾರಿಗಳು ಸೇವೆ ನೆರವೇರಿಸಿದರು. ಮಳೆಯ ಕಾರಣದಿಂದ ಕಡಿತಗೊಂಡಿದ್ದ ಸಂಪರ್ಕ ರಸ್ತೆಯನ್ನು ಮರು ನಿರ್ಮಾಣ ಮಾಡುವ ಮೂಲಕ ಶ್ಲಾಘನೆಗೆ ಪಾತ್ರವಾಗಿದ್ದಾರೆ. ಗ್ರಾಮೀಣ ಭಾಗದಲ್ಲಿಯೂ ಮಳೆಯ ಕಾರಣದಿಂದ ಹಲವು ಸಮಸ್ಯೆಗಳಾಗುತ್ತವೆ. ಇಂತಹ ಸಂದರ್ಭಗಳಲ್ಲಿ ಮಾಡಬಹುದಾದ ಕಾರ್ಯಗಳಿಗೆ ಇದೊಂದು ಮಾದರಿ.
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಭಾರೀ ಮಳೆಗೆ ಡಿಟ್ಟೆ ಡೈಮ್-ಮಿಗ್ಗಿಂಗ್ ರಸ್ತೆಯ ಸಿಯಾಂಗ್ ನದಿಯ ಉಪನದಿಗೆ ಕಟ್ಟಲಾಗಿರುವ 80 ಅಡಿ ಸೇತುವೆಯ ಮೇಲೆ ಮಣ್ಣು, ಕಲ್ಲು ಕುಸಿದ ಕಾರಣದಿಂದ ರಸ್ತೆ ಸಂಪರ್ಕವು ಕಡಿತಗೊಂಡಿತು. ಪರಿಣಾಮವಾಗಿ ಟ್ಯೂಟಿಂಗ್ ಉಪವಿಭಾಗದಂತಹ ಗಡಿ ಪ್ರದೇಶಗಳು ಸಂಪೂರ್ಣವಾಗಿ ಕಡಿತಗೊಂಡವು.
ತಕ್ಷಣವೇ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ಒ) ಸಿಬಂದಿಗಳು 72 ಗಂಟೆಗಳಲ್ಲಿ ಮರುಸಂಪರ್ಕ ಕಲ್ಪಿಸಿದ್ದಾರೆ. ಬಾರ್ಡರ್ ರೋಡ್ಸ್ ಟಾಸ್ಕ್ ಫೋರ್ಸ್ (ಬಿಆರ್ಟಿಎಫ್) ಅಧಿಕಾರಿ ಒ ಟಾಕಿ ಮಾತನಾಡಿ, ಭಾರಿ ಮಳೆಯ ನಡುವೆಯೂ, ಬಿಆರ್ಒ ಸಿಬ್ಬಂದಿ ರಸ್ತೆ ತಿರುವುವನ್ನು ಪೂರ್ಣಗೊಳಿಸಿ ಎಲ್ಲಾ ರೀತಿಯ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದರು ಎಂದು ಹೇಳಿದ್ದಾರೆ.
(Source : ANI)
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…