ಭಾರೀ ಮಳೆಯ ನಡುವೆ ಅಧಿಕಾರಿಗಳು ಸೇವೆ ನೆರವೇರಿಸಿದರು. ಮಳೆಯ ಕಾರಣದಿಂದ ಕಡಿತಗೊಂಡಿದ್ದ ಸಂಪರ್ಕ ರಸ್ತೆಯನ್ನು ಮರು ನಿರ್ಮಾಣ ಮಾಡುವ ಮೂಲಕ ಶ್ಲಾಘನೆಗೆ ಪಾತ್ರವಾಗಿದ್ದಾರೆ. ಗ್ರಾಮೀಣ ಭಾಗದಲ್ಲಿಯೂ ಮಳೆಯ ಕಾರಣದಿಂದ ಹಲವು ಸಮಸ್ಯೆಗಳಾಗುತ್ತವೆ. ಇಂತಹ ಸಂದರ್ಭಗಳಲ್ಲಿ ಮಾಡಬಹುದಾದ ಕಾರ್ಯಗಳಿಗೆ ಇದೊಂದು ಮಾದರಿ.
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಭಾರೀ ಮಳೆಗೆ ಡಿಟ್ಟೆ ಡೈಮ್-ಮಿಗ್ಗಿಂಗ್ ರಸ್ತೆಯ ಸಿಯಾಂಗ್ ನದಿಯ ಉಪನದಿಗೆ ಕಟ್ಟಲಾಗಿರುವ 80 ಅಡಿ ಸೇತುವೆಯ ಮೇಲೆ ಮಣ್ಣು, ಕಲ್ಲು ಕುಸಿದ ಕಾರಣದಿಂದ ರಸ್ತೆ ಸಂಪರ್ಕವು ಕಡಿತಗೊಂಡಿತು. ಪರಿಣಾಮವಾಗಿ ಟ್ಯೂಟಿಂಗ್ ಉಪವಿಭಾಗದಂತಹ ಗಡಿ ಪ್ರದೇಶಗಳು ಸಂಪೂರ್ಣವಾಗಿ ಕಡಿತಗೊಂಡವು.
ತಕ್ಷಣವೇ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ಒ) ಸಿಬಂದಿಗಳು 72 ಗಂಟೆಗಳಲ್ಲಿ ಮರುಸಂಪರ್ಕ ಕಲ್ಪಿಸಿದ್ದಾರೆ. ಬಾರ್ಡರ್ ರೋಡ್ಸ್ ಟಾಸ್ಕ್ ಫೋರ್ಸ್ (ಬಿಆರ್ಟಿಎಫ್) ಅಧಿಕಾರಿ ಒ ಟಾಕಿ ಮಾತನಾಡಿ, ಭಾರಿ ಮಳೆಯ ನಡುವೆಯೂ, ಬಿಆರ್ಒ ಸಿಬ್ಬಂದಿ ರಸ್ತೆ ತಿರುವುವನ್ನು ಪೂರ್ಣಗೊಳಿಸಿ ಎಲ್ಲಾ ರೀತಿಯ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದರು ಎಂದು ಹೇಳಿದ್ದಾರೆ.
(Source : ANI)
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…