ಭಾರೀ ಮಳೆಯ ನಡುವೆ ಅಧಿಕಾರಿಗಳು ಸೇವೆ ನೆರವೇರಿಸಿದರು. ಮಳೆಯ ಕಾರಣದಿಂದ ಕಡಿತಗೊಂಡಿದ್ದ ಸಂಪರ್ಕ ರಸ್ತೆಯನ್ನು ಮರು ನಿರ್ಮಾಣ ಮಾಡುವ ಮೂಲಕ ಶ್ಲಾಘನೆಗೆ ಪಾತ್ರವಾಗಿದ್ದಾರೆ. ಗ್ರಾಮೀಣ ಭಾಗದಲ್ಲಿಯೂ ಮಳೆಯ ಕಾರಣದಿಂದ ಹಲವು ಸಮಸ್ಯೆಗಳಾಗುತ್ತವೆ. ಇಂತಹ ಸಂದರ್ಭಗಳಲ್ಲಿ ಮಾಡಬಹುದಾದ ಕಾರ್ಯಗಳಿಗೆ ಇದೊಂದು ಮಾದರಿ.
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಭಾರೀ ಮಳೆಗೆ ಡಿಟ್ಟೆ ಡೈಮ್-ಮಿಗ್ಗಿಂಗ್ ರಸ್ತೆಯ ಸಿಯಾಂಗ್ ನದಿಯ ಉಪನದಿಗೆ ಕಟ್ಟಲಾಗಿರುವ 80 ಅಡಿ ಸೇತುವೆಯ ಮೇಲೆ ಮಣ್ಣು, ಕಲ್ಲು ಕುಸಿದ ಕಾರಣದಿಂದ ರಸ್ತೆ ಸಂಪರ್ಕವು ಕಡಿತಗೊಂಡಿತು. ಪರಿಣಾಮವಾಗಿ ಟ್ಯೂಟಿಂಗ್ ಉಪವಿಭಾಗದಂತಹ ಗಡಿ ಪ್ರದೇಶಗಳು ಸಂಪೂರ್ಣವಾಗಿ ಕಡಿತಗೊಂಡವು.
ತಕ್ಷಣವೇ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ಒ) ಸಿಬಂದಿಗಳು 72 ಗಂಟೆಗಳಲ್ಲಿ ಮರುಸಂಪರ್ಕ ಕಲ್ಪಿಸಿದ್ದಾರೆ. ಬಾರ್ಡರ್ ರೋಡ್ಸ್ ಟಾಸ್ಕ್ ಫೋರ್ಸ್ (ಬಿಆರ್ಟಿಎಫ್) ಅಧಿಕಾರಿ ಒ ಟಾಕಿ ಮಾತನಾಡಿ, ಭಾರಿ ಮಳೆಯ ನಡುವೆಯೂ, ಬಿಆರ್ಒ ಸಿಬ್ಬಂದಿ ರಸ್ತೆ ತಿರುವುವನ್ನು ಪೂರ್ಣಗೊಳಿಸಿ ಎಲ್ಲಾ ರೀತಿಯ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದರು ಎಂದು ಹೇಳಿದ್ದಾರೆ.
(Source : ANI)
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…
ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…
ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…