Advertisement
MIRROR FOCUS

ನೇಪಾಳದಲ್ಲಿ ಅಡಿಕೆ ಆಮದು ಮೇಲಿನ ನಿರ್ಬಂಧ ಸಡಿಲಿಕೆ | ಅಡಿಕೆ ಕಳ್ಳಸಾಗಾಣಿಕೆಗೆ ಇನ್ನೊಂದು ದಾರಿ…? |

Share
ನೇಪಾಳವು ಕಳೆದ ಕೆಲವು ಸಮಯಗಳಿಂದ ಬೇರೆ ದೇಶಗಳಿಂದ ಅಡಿಕೆ ಸಹಿತ ಕೆಲವು ಕೃಷಿ ವಸ್ತುಗಳ ಆಮದು ಮೇಲೆ  ನಿರ್ಬಂಧ ಹಾಕಿತ್ತು. ಇದೀಗ ನೇಪಾಳದ ಕೈಗಾರಿಕಾ ಸಚಿವಾಲಯವು ಅಡಿಕೆ, ಬಟಾಣಿ ಮತ್ತು ಕರಿಮೆಣಸಿನ ಆಮದು ಮೇಲಿನ ನಿರ್ಬಂಧವನ್ನು ಸಡಿಲಗೊಳಿಸಲು ನಿರ್ಧರಿಸಿದೆ. ಈ ಹಣಕಾಸು ವರ್ಷಕ್ಕೆ ಕೈಗಾರಿಕಾ ಉದ್ದೇಶಗಳಿಗಾಗಿ ಈ ನಿರ್ಬಂಧಗಳನ್ನು ತೆಗೆದುಹಾಕಲು ಉದ್ದೇಶಿಸಲಾಗಿದೆ. 
ಕಳೆದ ಸೋಮವಾರ ರಾಜ್ಯಪತ್ರದಲ್ಲಿ ಮಾಹಿತಿ ಪ್ರಕಟಿಸಿರುವ ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವಾಲಯವು, ಕೈಗಾರಿಕೆ ಉದ್ದೇಶಕ್ಕೆ ಅಗತ್ಯವಾದ ಅಡಿಕೆ, ಕರಿಮೆಣಸು, ಬಟಾಣಿ ಸೇರಿದಂತೆ ಇನ್ನೂ ಕೆಲವು ಕಚ್ಚಾ ಸಾಮಗ್ರಿಗಳನ್ನು ಆಮದು ಮಾಡಲು ಅವಕಾಶ ನೀಡಲಾಗಿದೆ.  ಕಳೆದ ಕೆಲವು ಸಮಯಗಳಿಂದ ಆಮದು ನಿರ್ಬಂಧವಿತ್ತು.ಆದರೆ ಈಗ ಯಾವ ವಸ್ತುಗಳನ್ನು , ಯಾವ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳಬೇಕು ಎಂಬುದನ್ನು ಸರ್ಕಾರ ಅಧಿಸೂಚನೆಯಲ್ಲಿ ಬಹಿರಂಗಪಡಿಸಿಲ್ಲ.
ಇದರಿಂದ ಕೈಗಾರಿಕಾ ಉದ್ದೇಶದ ಹೆಸರಿನಲ್ಲಿ ಮತ್ತೆ ಕಳ್ಳಸಾಗಣೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ನೇಪಾಳದ ಮಾಧ್ಯಮಗಳು ಎಚ್ಚರಿಸಿದೆ. ಈ ಹಿಂದೆ ನೇಪಾಳಕ್ಕೆ ಮಿತಿಗಿಂತ ಅಧಿಕವಾಗಿ ಅಡಿಕೆ ಆಮದಾಗಿ ಅಲ್ಲಿಂದ ಕಳ್ಳಸಾಗಾಣಿಕೆ ಮೂಲಕ ಭಾರತದ ಮಾರುಕಟ್ಟೆಗೆ  ತಲಪುತ್ತಿತ್ತು. ನೇಪಾಳ ಹಾಗೂ ಭಾರತದ ನಡುವೆ ಒಪ್ಪಂದದ ಪ್ರಕಾರ ಮುಕ್ತವಾಗಿ ಭಾರತದೊಳಕ್ಕೆ ಸಾಗಾಟವಾಗುತ್ತದೆ. ಹೀಗಾಗಿ ಬೇರೆ ದೇಶಗಳಿಂದ ಆಮದು ಮಾಡಿರುವ ಅಡಿಕೆಯನ್ನು ನೇಪಾಳದ ಮೂಲಕ ಭಾರತಕ್ಕೆ ಸಾಗಿಸುವ ಕೆಲಸ  ಈ ಹಿಂದೆ ನಡೆಯುತ್ತಿತ್ತು. ಇದಕ್ಕಾಗಿ ಅಡಿಕೆ ಆಮದು ನಿಷೇಧವನ್ನು ನೇಪಾಳ ಸರ್ಕಾರ ಮಾಡಿತ್ತು.
ನೇಪಾಳದಲ್ಲಿ ಬೆಳೆಯುವ ಅಲ್ಪಸ್ವಲ್ಪ ಅಡಿಕೆಯ ಮೇಲೆ, ಕಾಳುಮೆಣಸು ಮೇಲೆ ಪರಿಣಾಮ ಬೀರಿ, ಅಲ್ಲಿನ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲಾಗದ ಸ್ಥಿತಿಯಾಗಿತ್ತು. ಅಲ್ಲಿನ ಬಳಕೆಗೆ ನೇಪಾಳದಲ್ಲಿಯೇ ಬೆಳೆಯುವ ಅಡಿಕೆ ಉಪಯೋಗವಾಗುತ್ತಿತ್ತು. ಸರ್ಕಾರಕ್ಕೆ ಯಾವುದೇ ಲಾಭ ಇಲ್ಲದೆಯೇ ಬೇರೆ ದೇಶಗಳಿಂದ ಅಡಿಕೆ ನೇಪಾಳದ ಮೂಲಕ ಭಾರತದ ಮಾರುಕಟ್ಟೆಗೆ ಕಳ್ಳಸಾಗಾಣಿಕೆಯಲ್ಲಿ ನೇಪಾಳದ ಹೆಸರಿನಲ್ಲಿ ಬರುತ್ತಿತ್ತು. ಇದಕ್ಕಾಗಿ ನೇಪಾಳವು ಅಡಿಕೆ ಆಮದು ನಿಷೇಧ ಮಾಡಿತ್ತು. ಇದೀಗ ಅಡಿಕೆ, ಬಟಾಣಿ ಮತ್ತು ಕರಿಮೆಣಸಿನ ಆಮದು ಮೇಲಿನ ನಿರ್ಬಂಧವನ್ನು ಸಡಿಲಗೊಳಿಸಿದೆ. ಹೀಗಾಗಿ ಭಾರತದಲ್ಲಿ ಈಗಲೇ ಎಚ್ಚರವಹಿಸಬೇಕಾದ ಅಗತ್ಯ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

2 minutes ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

11 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

22 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

23 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago