Advertisement
MIRROR FOCUS

ನೇಪಾಳದಲ್ಲಿ ಅಡಿಕೆ ಆಮದು ಮೇಲಿನ ನಿರ್ಬಂಧ ಸಡಿಲಿಕೆ | ಅಡಿಕೆ ಕಳ್ಳಸಾಗಾಣಿಕೆಗೆ ಇನ್ನೊಂದು ದಾರಿ…? |

Share
ನೇಪಾಳವು ಕಳೆದ ಕೆಲವು ಸಮಯಗಳಿಂದ ಬೇರೆ ದೇಶಗಳಿಂದ ಅಡಿಕೆ ಸಹಿತ ಕೆಲವು ಕೃಷಿ ವಸ್ತುಗಳ ಆಮದು ಮೇಲೆ  ನಿರ್ಬಂಧ ಹಾಕಿತ್ತು. ಇದೀಗ ನೇಪಾಳದ ಕೈಗಾರಿಕಾ ಸಚಿವಾಲಯವು ಅಡಿಕೆ, ಬಟಾಣಿ ಮತ್ತು ಕರಿಮೆಣಸಿನ ಆಮದು ಮೇಲಿನ ನಿರ್ಬಂಧವನ್ನು ಸಡಿಲಗೊಳಿಸಲು ನಿರ್ಧರಿಸಿದೆ. ಈ ಹಣಕಾಸು ವರ್ಷಕ್ಕೆ ಕೈಗಾರಿಕಾ ಉದ್ದೇಶಗಳಿಗಾಗಿ ಈ ನಿರ್ಬಂಧಗಳನ್ನು ತೆಗೆದುಹಾಕಲು ಉದ್ದೇಶಿಸಲಾಗಿದೆ. 
ಕಳೆದ ಸೋಮವಾರ ರಾಜ್ಯಪತ್ರದಲ್ಲಿ ಮಾಹಿತಿ ಪ್ರಕಟಿಸಿರುವ ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವಾಲಯವು, ಕೈಗಾರಿಕೆ ಉದ್ದೇಶಕ್ಕೆ ಅಗತ್ಯವಾದ ಅಡಿಕೆ, ಕರಿಮೆಣಸು, ಬಟಾಣಿ ಸೇರಿದಂತೆ ಇನ್ನೂ ಕೆಲವು ಕಚ್ಚಾ ಸಾಮಗ್ರಿಗಳನ್ನು ಆಮದು ಮಾಡಲು ಅವಕಾಶ ನೀಡಲಾಗಿದೆ.  ಕಳೆದ ಕೆಲವು ಸಮಯಗಳಿಂದ ಆಮದು ನಿರ್ಬಂಧವಿತ್ತು.ಆದರೆ ಈಗ ಯಾವ ವಸ್ತುಗಳನ್ನು , ಯಾವ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳಬೇಕು ಎಂಬುದನ್ನು ಸರ್ಕಾರ ಅಧಿಸೂಚನೆಯಲ್ಲಿ ಬಹಿರಂಗಪಡಿಸಿಲ್ಲ.
ಇದರಿಂದ ಕೈಗಾರಿಕಾ ಉದ್ದೇಶದ ಹೆಸರಿನಲ್ಲಿ ಮತ್ತೆ ಕಳ್ಳಸಾಗಣೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ನೇಪಾಳದ ಮಾಧ್ಯಮಗಳು ಎಚ್ಚರಿಸಿದೆ. ಈ ಹಿಂದೆ ನೇಪಾಳಕ್ಕೆ ಮಿತಿಗಿಂತ ಅಧಿಕವಾಗಿ ಅಡಿಕೆ ಆಮದಾಗಿ ಅಲ್ಲಿಂದ ಕಳ್ಳಸಾಗಾಣಿಕೆ ಮೂಲಕ ಭಾರತದ ಮಾರುಕಟ್ಟೆಗೆ  ತಲಪುತ್ತಿತ್ತು. ನೇಪಾಳ ಹಾಗೂ ಭಾರತದ ನಡುವೆ ಒಪ್ಪಂದದ ಪ್ರಕಾರ ಮುಕ್ತವಾಗಿ ಭಾರತದೊಳಕ್ಕೆ ಸಾಗಾಟವಾಗುತ್ತದೆ. ಹೀಗಾಗಿ ಬೇರೆ ದೇಶಗಳಿಂದ ಆಮದು ಮಾಡಿರುವ ಅಡಿಕೆಯನ್ನು ನೇಪಾಳದ ಮೂಲಕ ಭಾರತಕ್ಕೆ ಸಾಗಿಸುವ ಕೆಲಸ  ಈ ಹಿಂದೆ ನಡೆಯುತ್ತಿತ್ತು. ಇದಕ್ಕಾಗಿ ಅಡಿಕೆ ಆಮದು ನಿಷೇಧವನ್ನು ನೇಪಾಳ ಸರ್ಕಾರ ಮಾಡಿತ್ತು.
ನೇಪಾಳದಲ್ಲಿ ಬೆಳೆಯುವ ಅಲ್ಪಸ್ವಲ್ಪ ಅಡಿಕೆಯ ಮೇಲೆ, ಕಾಳುಮೆಣಸು ಮೇಲೆ ಪರಿಣಾಮ ಬೀರಿ, ಅಲ್ಲಿನ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲಾಗದ ಸ್ಥಿತಿಯಾಗಿತ್ತು. ಅಲ್ಲಿನ ಬಳಕೆಗೆ ನೇಪಾಳದಲ್ಲಿಯೇ ಬೆಳೆಯುವ ಅಡಿಕೆ ಉಪಯೋಗವಾಗುತ್ತಿತ್ತು. ಸರ್ಕಾರಕ್ಕೆ ಯಾವುದೇ ಲಾಭ ಇಲ್ಲದೆಯೇ ಬೇರೆ ದೇಶಗಳಿಂದ ಅಡಿಕೆ ನೇಪಾಳದ ಮೂಲಕ ಭಾರತದ ಮಾರುಕಟ್ಟೆಗೆ ಕಳ್ಳಸಾಗಾಣಿಕೆಯಲ್ಲಿ ನೇಪಾಳದ ಹೆಸರಿನಲ್ಲಿ ಬರುತ್ತಿತ್ತು. ಇದಕ್ಕಾಗಿ ನೇಪಾಳವು ಅಡಿಕೆ ಆಮದು ನಿಷೇಧ ಮಾಡಿತ್ತು. ಇದೀಗ ಅಡಿಕೆ, ಬಟಾಣಿ ಮತ್ತು ಕರಿಮೆಣಸಿನ ಆಮದು ಮೇಲಿನ ನಿರ್ಬಂಧವನ್ನು ಸಡಿಲಗೊಳಿಸಿದೆ. ಹೀಗಾಗಿ ಭಾರತದಲ್ಲಿ ಈಗಲೇ ಎಚ್ಚರವಹಿಸಬೇಕಾದ ಅಗತ್ಯ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

16 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

20 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago