ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳು ಬದಲು ತೊಗರಿಬೇಳೆ ಹೆಚ್ಚುವರಿಯಾಗಿ ಕೊಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕಿಟ್ ನಲ್ಲಿದ್ದ 1ಕೆ.ಜಿ ಹೆಸರುಕಾಳನ್ನು ಬಿಟ್ಟು, ಅದರ ಬದಲಿಗೆ ತೊಗರಿಬೇಳೆಯನ್ನು ಹೆಚ್ಚುವರಿಯಾರಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ ತೊಗರಬೇಳೆ ಬೆಳೆಗಾರರ ಹಿತಾಸಕ್ತಿ ಕಾಪಾಡುವ ಮತ್ತು ಪಡಿತರದಾರರಿಗೆ ಮತ್ತಷ್ಟು ಪ್ರೋಟೀನ್ಯುಕ್ತ ಪೌಷ್ಟಿಕಾಂಶ ಒದಗಿಸುವ ಉದ್ದೇಶದೊಂದಿಗೆ ಈ ಬದಲಾವಣೆ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


